ಹೊಸದಿಗಂತ ಡಿಜಿಟಲ್ ಡೆಸ್ಕ್:
ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಂ.ಪಿ ರೇಣುಕಾಚಾರ್ಯ ಸೋಲಿನ ಆಘಾತ ಅನುಭವಿಸಿದ್ದರಿಂದ ಚುನಾವಣಾ ನಿವೃತ್ತಿ ಘೋಷಿಸಿದ್ದರು. ಹೀಗಾಗಿ ಅವರ ಮನೆ ಮುಂದೆ ಅಭಿಮಾನಿಗಳು ಪ್ರತಿಭಟನೆ ನಡೆಸಿದ್ದಾರೆ.
ರೇಣುಕಾಚಾರ್ಯರ ಹೊನ್ನಾಳಿಯಲ್ಲಿನ ಮನೆ ಮುಂದೆ ಅವರ ನಿರ್ಧಾರ ಹಿಂಪಡೆಯುವಂತೆ ಅಭಿಮಾನಿಗಳು ಆಗ್ರಹಿಸುತ್ತಿದ್ದಾರೆ.