ನಾಳೆ ಮಧ್ಯಾಹ್ನ ರೇಣುಕಾಚಾರ್ಯ ಸಹೋದರನ ಪುತ್ರ ‘ಚಂದ್ರಶೇಖರ್’ ಅಂತ್ಯಕ್ರಿಯೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್

ಬಿಜೆಪಿ ಶಾಸಕ ಎಂ.ಪಿ ರೇಣುಕಾಚಾರ್ಯ ಸಹೋದರನ ಪುತ್ರ ‘ಚಂದ್ರಶೇಖರ್ (24) ಮೃತದೇಹ ಪತ್ತೆಯಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇಂದು ದಾವಣಗೆರೆ ಆಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಯಲಿದ್ದು, ನಾಳೆ ಅಪರಾಹ್ನ 3 ಗಂಟೆಗೆ ಚಂದ್ರಶೇಖರ್ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ಮಾಹಿತಿ ನೀಡಿದೆ.

ಘಟನೆ ಸಂಬಂಧ ಈಗಾಗಲೇ ದುರಂತ ನಡೆದ ಸ್ಥಳಕ್ಕೆ ಎಫ್ ಎಸ್ ಎಲ್ ತಂಡ ( ವಿಧಿ ವಿಜ್ಞಾನ ಪ್ರಯೋಗಾಲಯದ ತಜ್ಞರು) ಧಾವಿಸಿ ಪರಿಶೀಲನೆ ನಡೆಸಿದೆ. ಎಫ್ ಎಸ್ ಎಲ್ ವರದಿಯಿಂದ ಸಾವಿನ ಸತ್ಯಾನುಸತ್ಯತೆ ಬಯಲಾಗಲಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!