ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾಸ್ವಾಮಿ ಕೊಲೆ ಪ್ರಕರಣದ 14ನೇ ಆರೋಪಿ ಪ್ರದೋಷ್ಗೆ ಮತ್ತೆ 5 ದಿನಗಳ ಕಾಲ ಜಾಮೀನು ನೀಡಿ 57ನೇ ಸಿಸಿಹೆಚ್ ಕೋರ್ಟ್ ಆದೇಶ ಹೊರಡಿಸಿದೆ.
ಕಳೆದ ಅಕ್ಟೋಬರ್ನಲ್ಲಿ ಪ್ರದೋಷ್ ತಂದೆ ನಿಧನರಾಗಿದ್ದರು. ಈ ಹಿನ್ನೆಲೆ ಅಂತ್ಯ ಸಂಸ್ಕಾರ ಹಾಗೂ ಇತರೆ ಕಾರ್ಯಗಳಲ್ಲಿ ಪಾಲ್ಗೊಳ್ಳಲು ಕೋರ್ಟ್ 20 ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಇದೀಗ ಪ್ರದೋಷ್ ಪರ ವಕೀಲರು 57ನೇ ಸಿಸಿಹೆಚ್ ಕೋರ್ಟ್ಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ 5 ದಿನಗಳ ಕಾಲ ಜಾಮೀನು ಮಂಜೂರು ಮಾಡಿದೆ.
18 ರಿಂದ ನ.22ರ ವರೆಗೆ ಜಾಮೀನು ಮಂಜೂರು ಮಾಡಿದ್ದು, ಅವಧಿ ಮುಗಿದ ಬಳಿಕ ಪರಪ್ಪನ ಅಗ್ರಹಾರಕ್ಕೆ ಮರಳುವಂತೆ ಸೂಚಿಸಿದೆ.

