ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಚಿಕ್ಕಣ್ಣ ಬೆನ್ನಲ್ಲೇ ಮತ್ತೋರ್ವ ನಟನಿಗೆ ಸಂಕಷ್ಟ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕು ಪಡೆದಿದ್ದು, ಕೊಲೆ ನಡೆದ ದಿನ ರೆಸ್ಟೋ ಬಾರ್ ನಲ್ಲಿ ನಡೆದ ಪಾರ್ಟಿಯಲ್ಲಿ ದರ್ಶನ್ ಜೊತೆ ಮತ್ತೊಬ್ಬ ನಟ ಭಾಗಿಯಾಗಿದ್ದ ಎಂದು ತಿಳಿದು ಬಂದಿದೆ.

‘ಗರಡಿ’ ಚಿತ್ರದ ನಟ ಯಶಸ್ ಸೂರ್ಯ ಕೂಡ ಚಿಕ್ಕಣ್ಣ ಜೊತೆ ಪಾರ್ಟಿಯಲ್ಲಿ ಭಾಗವಹಿಸಿದ್ದು, ಪ್ರಕರಣದ ಸಂಬಂಧ ನೊಟೀಸ್ ನೀಡುವ ಸಾಧ್ಯತೆ ಇದೆ.

ಇಂದು ದರ್ಶನ್ ಅವರೊಂದಿಗೆ ಪಾರ್ಟಿಯಲ್ಲಿ ಜೊತೆಯಾಗಿದ್ದ ನಟ ಚಿಕ್ಕಣ್ಣ ಅವರ ವಿಚಾರಣೆ ನಡೆಸಲಾಗಿದೆ. ಜೊತೆಗೆ ರೆಸ್ಟೋ ಬಾರ್ ನಲ್ಲಿ ಸ್ಥಳ ಮಹಜರು ನಡೆಸಲಾಗಿದೆ.

ಇದೀಗ ನಟ ಯಶಶ್ ಸೂರ್ಯಗೂ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!