ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಗಳ ಜಾಮೀನು ರದ್ದಾಗುತ್ತಿದ್ದಂತೆ ಎಲ್ಲಾ ಆರೋಪಿಗಳನ್ನು ಬಂಧಿಸಿ ಪರಪ್ಪನ ಅಗ್ರಹಾರಕ್ಕೆ ಕಳುಹಿಸಿದ್ದಾರೆ.
ನಟ ದರ್ಶನ್, ಪವಿತ್ರಗೌಡ ,ಪ್ರದೂಷ್, ನಾಗರಾಜ್ ಹಾಗೂ ಲಕ್ಷ್ಮಣನನ್ನು ಬಂಧಿಸಿ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ಕರೆತಂದರು. ಅಲ್ಲಿ ಆರೋಗ್ಯ ತಪಾಸಣೆ ಮಾಡಿಸಿ, ಕೋರಮಂಗಲದಲ್ಲಿರುವ 64ನೇ ಸಿಸಿಹೆಚ್ ಕೋರ್ಟ್ನ ನ್ಯಾಯಾಧೀಶರ ಮನೆಗೆ ಕರೆದೊಯ್ದು, ಜಡ್ಜ್ ಮುಂದೆ ಹಾಜರುಪಡಿಸಿದರು. ಈ ವೇಳೆ ಸುಪ್ರೀಂ ಕೋರ್ಟ್ ಜಾಮೀನು ರದ್ದು ಪಡಿಸಿದ ಆದೇಶ ಪ್ರತಿ ನ್ಯಾಯಾಧೀಶರಿಗೆ ಪೊಲೀಸರು ಸಲ್ಲಿಸಿ, ಆದೇಶ ಪಾಲಿಸಲಾಗಿದೆ ಎಂದು ಮಾಹಿತಿ ನೀಡಿದರು.
ಈ ಹಿಂದೆ ಸಹ ದರ್ಶನ್ ಎರಡು ಬಾರಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು. ಮೊದಲನೆ ಬಾರಿ 2011ರಲ್ಲಿ ತಮ್ಮ ಪತ್ನಿ ವಿಜಯಲಕ್ಷ್ಮಿಯವರ ಮೇಲೆ ಹಲ್ಲೆ ಮಾಡಿ ದರ್ಶನ್ ಸ್ವಲ್ಪ ದಿನಗಳ ಕಾಲ ಜೈಲುಪಾಲಾಗಿದ್ದರು. ಇನ್ನೂ ಎರಡನೇ ಬಾರಿ ರೇಣುಕಾಸ್ವಾಮಿ ಹತ್ಯೆ ಕೇಸ್ನಲ್ಲಿ ಮೊದಲು ಬಂಧನವಾದ ಬಳಿಕ ಪರಪ್ಪನ ಅಗ್ರಹಾರದಲ್ಲಿ ಇರಿಸಲಾಗಿತ್ತು. ಇದೀಗ ಜಾಮೀನು ರದ್ದಾದ ಬೆನ್ನಲ್ಲೇ ಮೂರನೇ ಬಾರಿಗೆ ದರ್ಶನ್ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ.