ಮಡಿಕೇರಿ ದಸರಾಕ್ಕೆ 5 ಕೋಟಿ ಅನುದಾನ ನೀಡುವಂತೆ ಮುಖ್ಯಮಂತ್ರಿಗೆ ಮನವಿ

ಹೊಸದಿಗಂತ ವರದಿ, ಮಡಿಕೇರಿ:
ಮಡಿಕೇರಿಯ ಐತಿಹಾಸಿಕ ದಸರಾ ಉತ್ಸವಕ್ಕೆ‌ 5 ಕೋಟಿ ರೂ.ಗಳ ಅನುದಾನ ಬಿಡುಗಡೆ ಮಾಡುವಂತೆ‌ ಸಿಎಂ ಬೊಮ್ಮಾಯಿ ಅವರನ್ನು ಮಡಿಕೇರಿ ಕ್ಷೇತ್ರದ ಶಾಸಕ ಅಪ್ಪಚ್ಚುರಂಜನ್ ಹಾಗೂ ವಿಧಾನಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಅವರುಗಳು ಮನವಿ ಮಾಡಿದ್ದಾರೆ.
ಮೈಸೂರಿನಲ್ಲಿ ಮುಖ್ಯಮಂತ್ರಿ‌ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿರುವ ವಿಧಾನಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಅವರು, ಮಡಿಕೇರಿ ದಸರಾಕ್ಕೆ ಸುಮಾರು 125 ವರ್ಷಗಳಿಗೂ ಅಧಿಕ ಕಾಲದ ಇತಿಹಾಸವಿದ್ದು, ಕಳೆದ 25 ವರ್ಷಗಳಿಂದ ಸರಕಾರದ ಅನುದಾನದಲ್ಲಿ ದಸರಾವನ್ನು ಜನೋತ್ಸವವನ್ನಾಗಿ ಆಚರಿಸಲಾಗುತ್ತಿದೆ.
ಕಳೆದ ಬಾರಿಯೂ ದಸರಾ ಉತ್ಸವಕ್ಕೆ ಒಂದು ಕೋಟಿ ರೂ.ಗಳ ಅನುದಾನ ಬಿಡುಗಡೆ ಮಾಡಲಾಗಿದ್ದು, ಈ ವರ್ಷ ಅತಿವೃಷ್ಟಿಯಿಂದಾಗಿ ಮಡಿಕೇರಿ‌ ನಗರದ ಹಲವು ರಸ್ತೆಗಳು ಹಾಳಾಗಿವೆ. ಈ ರಸ್ತೆಗಳನ್ನು ದುರಸ್ತಿ ಪಡಿಸಿ ದಸರಾ ಅಚರಿಸಲು ಈ ಬಾರಿ ಕನಿಷ್ಟ 5 ಕೋಟಿ ರೂ.ಗಳ ಅನುದಾನ ಬಿಡುಗಡೆ ಮಾಡಲು ಸಂಬಂಧಿಸಿದವರಿಗೆ ಆದೇಶ ನೀಡಬೇಕು ಎಂದು ಮನವಿಯಲ್ಲಿ ಕೋರಿದ್ದಾರೆ.
ಈ ಸಂದರ್ಭ ಕೊಡಗು- ಮೈಸೂರು‌ ಲೋಕಸಭಾ ಕ್ಷೇತ್ರದ ಸಂಸದ‌ ಪ್ರತಾಪ್ ಸಿಂಹ ಜೊತೆಗಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!