ಹೊಸದಿಗಂತ ವರದಿ, ಮುಂಡಗೋಡ:
ತಾಲೂಕಿನ ಕೊಪ್ಪ ಗ್ರಾಮದಲ್ಲಿ ಶುಕ್ರವಾರ ಪತ್ತೆಯಾಗಿರುವ ಅಪರೂಪದ ಸಣ್ಣ ಸಿವೆಟ್ ಬೆಕ್ಕಿನ ಮರಿಯನ್ನು ಅರಣ್ಯ ರಕ್ಷಕ ಶ್ರೀಧರ ಭಜಂತ್ರಿ ರಕ್ಷಣೆ ಮಾಡಿ ಸುರಕ್ಷಿತವಾಗಿ ಅರಣ್ಯಕ್ಕೆ ಬಿಟ್ಟಿದ್ದಾರೆ.
ಅಪರೂಪದ ಬೆಕ್ಕು ಆಗಿರುವ ಸಣ್ಣ ಸಿವೆಟ್ ಕಾಡು ಪ್ರಾಣಿ. ತಾಲೂಕಿನ ಕೊಪ್ಪ ಗ್ರಾಮದಲ್ಲಿ ಶುಕ್ರವಾರ ಕಂಡು ಬಂದಿದ್ದು ಸ್ಥಳೀಯರ ಮಾಹಿತಿ ಮೇರೆಗೆ ಅರಣ್ಯ ರಕ್ಷಕ ಶ್ರೀಧರ ಭಜಂತ್ರಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ನಂತರ ಬೆಕ್ಕನ್ನು ರಕ್ಷಣೆ ಮಾಡಿ ಚಿಕಿತ್ಸೆ ನೀಡಿ ಅರಣ್ಯಕ್ಕೆ ಬಿಟ್ಟಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ