ಉಡುಪಿ ಕಡಲಿನಲ್ಲಿ ಕೊಚ್ಚಿಹೋಗುತ್ತಿದ್ದ ಬೆಂಗಳೂರು ಮೂಲದ ಇಬ್ಬರ ರಕ್ಷಣೆ

ಹೊಸದಿಗಂತ ವರದಿ ಮಂಗಳೂರು:

ಉಡುಪಿ ಜಿಲ್ಲೆಯ ಮಲ್ಪೆ ಸಮೀಪದ ಕೋಡಿ ಬೆಂಗ್ರೆ ಪರಿಸರದ ಕಡಲಿನಲ್ಲಿ ಈಜಲು ಇಳಿದು ನೀರುಪಾಲಾಗುತ್ತಿದ್ದ ಇಬ್ಬರನ್ನು ಮೀನುಗಾರಿಕಾ ದೋಣಿಯಲ್ಲಿದ್ದವರು ರಕ್ಷಿಸಿ ದಡಕ್ಕೆ ಕರೆತಂದಿದ್ದಾರೆ.

ಈ ಇಬ್ಬರು ಬೆಂಗಳೂರು ಮೂಲದವರು ಎಂದು ತಿಳಿದುಬಂದಿದ್ದು, ಮೂವರು ಯುವತಿಯರ ಸಹಿತ ವಿಹಾರಕ್ಕಾಗಿ ಬಂದಿದ್ದರು. ಈ ಪೈಕಿ ಇಬ್ಬರು ಕಡಲಿನಲ್ಲಿ ಈಜಲು ನೀರಿಗಿಳಿದಿದ್ದು, ಅಲೆಯ ಸೆಳೆತಕ್ಕೆ ಸಿಲುಕಿ ಕೊಚ್ಚಿಹೋಗುತ್ತಿದ್ದರು.

ಇದನ್ನು ಕಂಡ ಮೀನುಗಾರಿಕಾ ದೋಣಿಯಲ್ಲಿದ್ದವರು ತಕ್ಷಣವೇ ರಕ್ಷಣಾ ಕಾರ್ಯಾಚರಣೆಗಿಳಿದಿದ್ದು ಇಬ್ಬರನ್ನು ರಕ್ಷಿಸಿ ದಡಕ್ಕೆ ಕರೆತಂದಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!