ಜೋಶಿಮಠದಲ್ಲಿ ಮುಂದುವರಿದ ಭೂಕುಸಿತ: ಜನರ ಸ್ಥಳಾಂತರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಉತ್ತರಾಖಂಡದ ಜೋಶಿಮಠ ಪಟ್ಟಣದಲ್ಲಿ ಭೂಕುಸಿತ ಮುಂದುವರಿದಿದ್ದು, ಜಿಲ್ಲಾಡಳಿತವು ಪ್ರದೇಶದಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಭೂಕುಸಿತದಿಂದ ಮನೆಗಳು ಬಿರುಕು ಬಿಟ್ಟಿರುವ ಜನರನ್ನು ಬೇರೆಡೆಗೆ ಸ್ಥಳಾಂತರ ಮಾಡಲಾಗಿದೆ.

ಸಂತ್ರಸ್ತ ಜನರು ಮತ್ತು ಮಕ್ಕಳು ಪ್ರಸ್ತುತ ರಾತ್ರಿ ಆಶ್ರಯದಲ್ಲಿ ವಾಸಿಸುತ್ತಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಭೂಕುಸಿತ ಸಂತ್ರಸ್ತರಿಗೆ  ಸರ್ಕಾರದಿಂದ ಪ್ರೀ ಫ್ಯಾಬ್ರಿಕೇಟೆಡ್ ಮನೆಗಳನ್ನು ನೀಡುವುದಾಗಿ ಭರವಸೆ ನೀಡಲಾಗಿದೆ. ಆದರೆ, ಮನೆಗಳು ಯಾವಾಗ ಹಂಚಿಕೆಯಾಗುತ್ತವೆ ಎಂಬ ಆತಂಕ ಜನರಲ್ಲಿ ಮೂಡಿದೆ. ಜೋಶಿಮಠದಲ್ಲಿ ಭೂಮಿ ಕುಸಿದು ಮನೆಗಳಿಗೆ ಹಾನಿಯಾದ ಕಾರಣವನ್ನು ಕಂಡುಹಿಡಿಯಲು ವಿಜ್ಞಾನಿಗಳ ತಂಡವನ್ನು ಸರ್ಕಾರ ರಚಿಸಿದೆ.

ಅಧಿಕೃತ ಹೇಳಿಕೆಯ ಪ್ರಕಾರ, ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರ ಸೂಚನೆಯ ಮೇರೆಗೆ ರಚಿಸಲಾದ ತಂಡದಲ್ಲಿ ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ, ವಾಡಿಯಾ ಇನ್‌ಸ್ಟಿಟ್ಯೂಟ್ ಮತ್ತು ಐಐಟಿ ರೂರ್ಕಿಯ ಎಂಜಿನಿಯರ್‌ಗಳ ತಂಡವನ್ನು ನಿಯೋಜಿಸಲಾಗಿದೆ.

ಪಟ್ಟಣದಲ್ಲಿ ನಿರಂತರ ಭೂಮಿ ಕುಸಿತದ ಪರಿಣಾಮವಾಗಿ ಜೋಶಿಮಠದ 561 ಮನೆಗಳಲ್ಲಿ ಬಿರುಕುಗಳು ಉಂಟಾಗಿವೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಇಲಾಖೆ ತಿಳಿಸಿದೆ. ಮನೆಗಳಲ್ಲಿ ಬಿರುಕು ಕಾಣಿಸಿಕೊಂಡ ನಂತರ, 66 ಕುಟುಂಬಗಳು ಜೋಶಿಮಠದಿಂದ ವಲಸೆ ಹೋಗಿದ್ದಾರೆ ಎಂದು ವರದಿಯಾಗಿದೆ.

ಪ್ರಸ್ತುತ ಸಿಂಘಧಾರ್ ಮತ್ತು ಮಾರ್ವಾಡಿಯಲ್ಲಿ ಕೂಡ ಬಿರುಕು ಬಿಡುವ ಪ್ರಕ್ರಿಯೆ ಪ್ರಾರಂಭವಾಗಿದೆ. ಸಿಂಗ್ಧರ್ ಜೈನ್ ಪ್ರದೇಶದ ಬಳಿಯ ಬದರಿನಾಥ್ ಎನ್ಎಚ್ ಮತ್ತು ಅರಣ್ಯ ಇಲಾಖೆ ಚೆಕ್ ಪೋಸ್ಟ್ ಬಳಿಯ ಮಾರ್ವಾಡಿಯ ಜೆಪಿ ಕಂಪನಿ ಗೇಟ್ ನಿರಂತರವಾಗಿ ಬಿರುಕು ಬಿಡುತ್ತಿದೆ. ಪ್ರತಿ ಗಂಟೆಗೂ ಈ ಬಿರುಕು ಹೆಚ್ಚಾಗುತ್ತಿರುವುದು ಆತಂಕಕಾರಿಯಾಗಿದೆ ಎಂದು ಜೋಶಿಮಠ ಪುರಸಭೆ ಅಧ್ಯಕ್ಷ ಶೈಲೇಂದ್ರ ಪವಾರ ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!