ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೇಘ ಸ್ಪೋಟಕ್ಕೆ ತುತ್ತಾಗಿರುವ ಜಮ್ಮು ಕಾಶ್ಮೀರದ ಅಮರನಾಥದಲ್ಲಿ ರಕ್ಷಣಾ ಕಾರ್ಯ ಮುಂದುವರೆಯುತ್ತಿದೆ. ಭಾರತೀಯ ಸೇನೆಯ ವತಿಯಿಂದ ಅಪಾಯದಲ್ಲಿ ಸಿಲುಕಿರುವ ಯಾತ್ರಾರ್ಥಿಗಳನ್ನು ಸುರಕ್ಷಿತ ಸ್ಥಳಗಳಿಗೆ ರವಾನಿಸಲಾಗುತ್ತಿದೆ. ಗಾಯಾಳುಗಳನ್ನು ಏರ್ ಲಿಫ್ಟ್ ಮಾಡಲಾಗುತ್ತಿದೆ ಎಂದು ಮೂಲಗಳು ವರದಿ ಮಾಡಿವೆ.
ಸಾವನ್ನಪ್ಪಿರುವ 16 ಮಂದಿಯ ಪಾರ್ಥಿವ ಶರೀರಗಳನ್ನು ಸೇನಾ ಹೆಲಿಕಾಪ್ಟರ್ ಬಳಸಿ ರವಾನೆ ಮಾಡಲಾಗಿದೆ. ಅಪಾಯದಲ್ಲಿ ಸಿಲುಕಿರುವ ಸುಮಾರು 15,000 ಮಂದಿಯನ್ನು ಸುರಕ್ಷಿತ ಸ್ಥಳಗಳಿಗೆ ವರ್ಗಾಯಿಸಲಾಗಿದ್ದು ರಕ್ಷಣಾ ಕಾರ್ಯ ಭರದಿಂದ ಸಾಗಿದೆ. 40 ಜನ ನಾಪತ್ತೆಯಾಗಿದ್ದು ಅವರನ್ನು ಹುಡುಕುವ ಕಾರ್ಯ ನಡೆಯುತ್ತಿದೆ. ದೇವಾಲಯದ ಎರಡು ಕಡೆಗಳಿಂದ ಹಠಾತ್ ಆಗಿ ರಭಸವದಲ್ಲಿ ನೀರಿನ ಅಲೆಗಳು ಪ್ರವಹಿಸಿದ ಪರಿಣಾಮ ಯಾತ್ರಾರ್ಥಿಗಳು ತಂಗಿದ್ದ ಡೇರೆಗಳುಕೊಚ್ಚಿಕೊಂಡು ಹೋಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಸೇನಾ ಹೆಲಿಕಾಪ್ಟರ್ಗಳನ್ನು ಸೇವೆಗೆ ಒಳಪಡಿಸಲಾಗಿದೆ ಎಂದು ಮೂಲಗಳು ವರದಿ ಮಾಡಿವೆ.
J&K | CRPF personnel carries out rescue operation in cloudburst affected area at the lower #Amarnath Cave site
(Source: CRPF) pic.twitter.com/rAx2HUTW6h
— ANI (@ANI) July 9, 2022