ದೇಶದ ಗಡಿ ಕಾಯುವ ಅಗ್ನಿವೀರರಿಗೆ ಸಿಹಿ ಸುದ್ದಿ: ಇನ್ಮುಂದೆ ರೈಲ್ವೆ ನೇಮಕಾತಿಯಲ್ಲಿ ಮೀಸಲಾತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ದೇಶದ ಗಡಿ ಕಾಯುವ ಅಗ್ನಿವೀರರಿಗೆ ಭಾರತೀಯ ರೈಲ್ವೆಯು ಸಿಹಿ ಸುದ್ದಿಯೊಂದನ್ನು ನೀಡಿದೆ. ರೈಲ್ವೆ ಇಲಾಖೆ ಉದ್ಯೋಗದಲ್ಲಿ ಅಗ್ನಿವೀರರಿಗೆ ಶೇ.15ರಷ್ಟು ಮೀಸಲಾತಿ ನೀಡುವುದಾಗಿ ಹೇಳಿದೆ.

ರೈಲ್ವೆ ಇಲಾಖೆಯ ಲೆವೆಲ್​ 1 ಹುದ್ದೆಗಳಲ್ಲಿ ಶೇ.10ರಷ್ಟು ಮೀಸಲಿಡಲಾಗುತ್ತದೆ, ಲೆವೆಲ್​ 2, ಗೆಜೆಟೆಡ್​ ಅಲ್ಲದ ಹುದ್ದೆಗಳಲ್ಲಿ ಶೇ.5ರಷ್ಟು ಮೀಸಲಿಡಲಾಗುತ್ತದೆ, ಒಟ್ಟು ಶೇ. 15ರಷ್ಟು ಮೀಸಲಾತಿ ಕಲ್ಪಿಸಲು ರೈಲ್ವೆ ಇಲಾಖೆ ನಿರ್ಧರಿಸಿದೆ.

ವಿವಿಧ ಇಲಾಖೆಗಳಲ್ಲಿನ ನಾನ್ ಗೆಜೆಟೆಡ್ ಹುದ್ದೆಗಳ ಭರ್ತಿಗೆ ನಡೆಯುವ ನೇರ ನೇಮಕಾತಿಯಲ್ಲಿ ರೈಲ್ವೆಯು ಅಗ್ನಿವೀರರಿಗೆ ಶೇ.15ರಷ್ಟು ಮೀಸಲಾತಿ ನೀಡಲಿದೆ.

ಅಗ್ನಿವೀರರಿಗಾಗಿ ರೈಲ್ವೆಯ ಭದ್ರತಾ ಪಡೆಗಳಲ್ಲಿ ಕೂಡ ಮೀಸಲಾತಿ ನೀತಿಯನ್ನು ಜಾರಿಗೆ ತರಲಾಗುತ್ತದೆ. ಮೊದಲ ಬ್ಯಾಚ್​ನ ಅಗ್ನಿವೀರರಿಗೆ ವಯೋಮಿತಿಯಲ್ಲಿ 5 ವರ್ಷ ಹಾಗೂ ನಂತರದ ಬ್ಯಾಚ್​ಗಳ ಅಗ್ನಿವೀರರಿಗೆ 3 ವರ್ಷಗಳಷ್ಟು ಸಡಿಲಿಕೆ ನೀಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಕಳೆದ ವರ್ಷ ಕೇಂದ್ರವು ಪ್ರಾರಂಭಿಸಿದ ‘ಅಗ್ನಿಪಥ್’ ನೇಮಕಾತಿ ಯೋಜನೆಯಡಿ, ನಾಲ್ಕು ವರ್ಷಗಳನ್ನು ಪೂರ್ಣಗೊಳಿಸಿದ ನಂತರ ಕೇವಲ 25 ಪ್ರತಿಶತದಷ್ಟು ಅಗ್ನಿವೀರ್‌ಗಳನ್ನು ಮಾತ್ರ ಪಡೆಯಲಾಗುತ್ತದೆ ಮತ್ತು ಉಳಿದವರು ನಿವೃತ್ತರಾಗುತ್ತಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!