ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ಯುವಮೋರ್ಚಾ ಕಾರ್ಯಕರ್ತ ಪ್ರವೀಣ್ ನಟ್ಟಾರ್ ಹತ್ಯೆಯಿಂದ ಅಸಮಾಧಾನಗೊಂಡು ಬಿಜೆಪಿ ಹಿನ್ನಲೆಯಲ್ಲಿ ರಾಜೀನಾಮೆ ಪರ್ವ ಮುಂದುವರಿದಿದ್ದು, ಉಡುಪಿಯ ಮಲ್ಪೆ ಬೈಲಕೆರೆ ವಾರ್ಡ್ ನಲ್ಲಿ ಏಳು ಜನ ರಾಜೀನಾಮೆ ನೀಡಿದ್ದಾರೆ.
ತೆಂಕನಿಡಿಯೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ವಿಜಯಪ್ರಕಾಶ್, ಉಡುಪಿ ಶಕ್ತಿ ಕೇಂದ್ರದ ಅಧ್ಯಕ್ಷ ಶರತ್ ಕುಮಾರ್, ತೆಂಕನಿಡಿಯೂರು ಗ್ರಾ.ಪಂ ಉಪಾಧ್ಯಕ್ಷ ಅರುಣ್ ಜತ್ತನ್, ತೆಂಕನಿಡಿಯೂರು ವಾರ್ಡ್ ಸಮಿತಿ ಅಧ್ಯಕ್ಷ ಸತೀಶ್ ಆರ್ ಪೂಜಾರಿ, ವಿಕಿತಾ ಸುರೇಶ್, ಮಂಜುನಾಥ, ಪ್ರಶಾಂತ್ ಪತ್ರದ ಮೂಲಕ ಜಿಲ್ಲಾಧ್ಯಕ್ಷರಿಗೆ ರಾಜಿನಾಮೆ ಸಲ್ಲಿಸಿದ್ದಾರೆ
ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅವರಿಗೆ ಪತ್ರ ಮೂಲಕ ರಾಜಿನಾಮೆ ಸಲ್ಲಿಸಿದ್ದು, ಬಿಜೆಪಿ ಆಡಳಿತ ರಾಜ್ಯ ಸರಕಾರದಲ್ಲಿ ಹಿಂದು ಕಾರ್ಯಕರ್ತರಿಗೆ ಅಸುರಕ್ಷತೆ ಇದೆ. ಹಿಂದು ಕಾರ್ಯಕರ್ತ ಪ್ರವೀಣ್ ಹತ್ಯೆ ಮನಸ್ಸಿಗೆ ನೋವುಂಟು ಮಾಡಿದೆ, ಹಿಂದೂ ಕಾರ್ಯಕರ್ತರ ಸುರಕ್ಷತೆ ಬಗ್ಗೆ ರಾಜ್ಯ ಸರಕಾರದ ಮೇಲೆ ವಿಶ್ವಾಸ ಕಳೆದು ಹೋಗಿದೆ. ಹೀಗಾಗಿ ಅತ್ಯಂತ ನೋವಿನಿಂದ ಕಠಿಣ ಕ್ರಮ ತೆಗೆದುಕೊಂಡಿದ್ದೇವೆ, ಇದು ನಮ್ಮ ವೈಯಕ್ತಿಕ ನಿರ್ಧಾರವಾಗಿದ್ದು ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ ವಿಮುಕ್ತ ಮಾಡಿ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.