ಮಾವು ಬೆಳೆಗಾರರ ಸಮಸ್ಯೆಗೆ ಸ್ಪಂದಿಸಿ: ಕೇಂದ್ರ ಕೃಷಿ ಸಚಿವರಿಗೆ ಹೆಚ್.ಡಿ ಕುಮಾರಸ್ವಾಮಿ ಪತ್ರ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮಾವುಗಳ ದರ ಇಳಿಕೆಯ ಕಾರಣದಿಂದ ಸಂಕಷ್ಟಕ್ಕೆ ಈಡಾಗಿದ್ದ ಬೆಳೆಗಾರರ ಬೆಂಬಲಕ್ಕೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ನಿಂತಿದ್ದಾರೆ. ಈ ಸಂಬಂಧ ಕೇಂದ್ರ ಕೃಷಿ ಸಚಿವರಿಗೆ ಅವರು ಪತ್ರ ಬರೆದು, ರೈತರ ಸಮಸ್ಯೆಗೆ ಪರಿಹರಿಸುವಂತೆ ಮನವಿ ಮಾಡಿದ್ದಾರೆ.

ಮಾವು ಬೆಳೆಗಾರರ ಸಮಸ್ಯೆಯ ಸಂಬಂಧ ಹೆಚ್.ಡಿ ಕುಮಾರಸ್ವಾಮಿ ಅವರು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌವ್ಹಾಣಗೆ ಪತ್ರ ಬರೆದಿದ್ದಾರೆ. ರಾಜ್ಯದಲ್ಲಿನ ವಾತಾವರಣ, ಮಾವಿನ ಬೆಲೆ ಕುಸಿತದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೂಡಲೇ ಮಾವು ಬೆಳೆಗಾರರ ಸಮಸ್ಯೆ ಪರಿಹರಿಸಲು ಪತ್ರ ಬರೆದು ಸಮಸ್ಯೆಗೆ ನೆರವಾಗುವಂತೆ ಮನವಿ ಮಾಡಿದ್ದಾರೆ.

ಬೆಂಗಳೂರು ನಗರ, ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ ಮುಂತಾದ ಜಿಲ್ಲೆಗಳಲ್ಲಿ ಮಾವು ಬೆಳೆಗಾರರು ಸಂಕಷ್ಟದಲ್ಲಿ ಇದ್ದಾರೆ. ಮಾವು ಬೆಳೆಗಾರರಿಗೆ ಪರಿಹಾರ ನೀಡುವಂತೆ ಕೇಂದ್ರ ಸಚಿವರಲ್ಲಿ ಮನವಿ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!