ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಣಿಪುರ ಸದ್ಯ ಸಹಜ ಸ್ಥಿತಿಯತ್ತ ಮರಳುತ್ತಿದ್ದು, ಈ ಕ್ಷಣ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮನವಿಯಂತೆ ಮಣಿಪುರದ ವಿವಿಧ ಸ್ಥಳಗಳಲ್ಲಿ 140ಕ್ಕೂ ಹೆಚ್ಚು ಶಸ್ತ್ರಾಸ್ತ್ರಗಳನ್ನ ಒಪ್ಪಿಸಲಾಗಿದೆ.
ನಾಲ್ಕು ದಿನಗಳ ಮಣಿಪುರ ಭೇಟಿಯ ಕೊನೆಯ ದಿನವಾದ ಗುರುವಾರ ಅಮಿತ್ ಶಾ, ಭದ್ರತಾ ಪಡೆಗಳು ಮತ್ತು ಆಡಳಿತಕ್ಕೆ ತಮ್ಮ ಶಸ್ತ್ರಾಸ್ತ್ರಗಳನ್ನ ಒಪ್ಪಿಸುವಂತೆ ಸಂಬಂಧಪಟ್ಟ ಎಲ್ಲರಿಗೂ ಮನವಿ ಮಾಡಿದರು.
ಯಾರಾದರೂ ಯಾವುದೇ ಶಸ್ತ್ರಾಸ್ತ್ರವನ್ನ ಹೊಂದಿರುವುದು ಕಂಡುಬಂದ್ರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದರು.
ಇದಾದ ಬಳಿಕ ಶುಕ್ರವಾರ ಬೆಳಿಗ್ಗೆಯವರೆಗೆ 140ಕ್ಕೂ ಹೆಚ್ಚು ಶಸ್ತ್ರಾಸ್ತ್ರಗಳನ್ನ ಒಪ್ಪಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಮಣಿಪುರದ ಪರಿಸ್ಥಿತಿಯು ಹೆಚ್ಚಿನ ಜಿಲ್ಲೆಗಳಲ್ಲಿ ಬಹುತೇಕ ಶಾಂತಿಯುತವಾಗಿದೆ.