ಶಾಸಕ ಕಾಮತ್ ಮನವಿಗೆ ಸ್ಪಂದನೆ: ದ.ಕ. ಜಿಲ್ಲೆಯಲ್ಲಿ ಸೆ.26 ರಿಂದ ಅ.10 ರವರೆಗೆ ದಸರಾ ರಜೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಮಂಗಳೂರು ದಕ್ಷಿಣ ಕ್ಷೇತ್ರ ಶಾಸಕ ಡಿ. ವೇದವ್ಯಾಸ ಕಾಮತ್ ಅವರ ಮನವಿಯಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಸರಾ ರಜೆ ಅವಧಿಯನ್ನು ನವರಾತ್ರಿ ಹಬ್ಬಕ್ಕೆ ಪೂರಕವಾಗುವಂತೆ ಸೆ.26ರಿಂದ ಅ.10ರವರೆಗೆ ನಿಗದಿಪಡಿಸಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಶೈಕ್ಷಣಿಕ ಚಟುವಟಿಕೆಗಳನ್ನು ಸರಿದೂಗಿಸುವ ಹಾಗೂ ಅ.2 ರಂದು ಮಹಾತ್ಮಾ ಗಾಂಧಿ ಜಯಂತಿಯನ್ನು ಆಚರಿಸುವ ಷರತ್ತಿನ ಮೇರೆಗೆ ರಜೆಯನ್ನು ನೀಡಲು ಜಿಲ್ಲಾಧಿಕಾರಿಗೆ ಸೂಚಿಸುವಂತೆ, ಸಚಿವರು ಶಾಲಾ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!