ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶಕ್ಕೆ ಒಂದೇ ದಿನ ಬಾಕಿ ಇದ್ದು, ಎಲ್ಲ ಪಕ್ಷಗಳಲ್ಲಿಯೂ ಚಟುವಟಿಕೆಗಳು ಹೆಚ್ಚಾಗಿವೆ.
ಕಾಂಗ್ರೆಸ್ ತಡರಾತ್ರಿ ಝೂಮ್ ಮೀಟಿಂಗ್ ಮೂಲಕ ತನ್ನ ಅಭ್ಯರ್ಥಿಗಳ ಜೊತೆ ಸಭೆ ನಡೆಸಿದ್ದರೆ, ಇತ್ತ ಜೆಡಿಎಸ್ ನಾಯಕರು ತಮ್ಮ ಅಭ್ಯರ್ಥಿಗಳ ಜೊತೆ ಸಂಪರ್ಕದಲ್ಲಿದ್ದು, ಆಮಿಷಗಳಿಗೆ ಬಲಿಯಾಗಬೇಡಿ ಎಂದು ಹೇಳುತ್ತಿದ್ದಾರೆ.
ಇದೀಗ ಬಿಜೆಪಿ ಕೂಡ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ನಿವಾಸದಲ್ಲಿ ಸಭೆ ನಡೆಸಿದೆ. ಸಚಿವ ಭೈರತಿ ಬಸವರಾಜ, ಸಚಿವ ಮುರುಗೇಶ್ ನಿರಾಣಿ, ಲೆಹರ್ ಸಿಂಗ್, ಎ.ಟಿ. ರಾಮಸ್ವಾಮಿ ಮೀಟಿಂಗ್ನಲ್ಲಿ ಹಾಜರಿದ್ದಾರೆ.
Karnataka CM Basavaraj Bommai and other BJP leaders hold a key meeting at former CM BS Yediyurappa's residence in Bengaluru. pic.twitter.com/jXMEkJqXwU
— ANI (@ANI) May 12, 2023