ನಿವೃತ್ತ ಐಪಿಎಸ್ ಅಧಿಕಾರಿ ಓಂ ಪ್ರಕಾಶ್ ಹತ್ಯೆ ಪ್ರಕರಣ : ಇಂದು ಅಂತಿಮ ವಿಧಿ ವಿಧಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ನಿವೃತ್ತ ಐಪಿಎಸ್ ಅಧಿಕಾರಿ ಓಂ ಪ್ರಕಾಶ್ ಅವರ ಮೃತದೇಹದ ಅಂತಿಮ ದರುಶನಕ್ಕೆ ಹೆಚ್ಎಸ್ಆರ್ ಲೇಔಟ್ 6ನೇ ಹಂತದ ಎಂಸಿಹೆಚ್ಎಸ್ ಕ್ಲಬ್‌ನಲ್ಲಿ ವ್ಯವಸ್ಥೆ ಕಲ್ಪಿಸಲಾಗಿದೆ.

ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಅಂತಿಮ ದರುಶನಕ್ಕೆ ಇರಿಸಲಾಗುತ್ತದೆ. ಬಳಿಕ, ವಿಲ್ಸನ್ ಗಾರ್ಡನ್‌ನಲ್ಲಿರುವ ವಿದ್ಯುತ್ ಚಿತಾಗಾರದಲ್ಲಿ ಅಂತಿಮ ವಿಧಿ ವಿಧಾನ ನೆರವೇರಿಸಲಾಗುವುದು ಎಂದು ಓಂ ಪ್ರಕಾಶ್ ಅವರ ಪುತ್ರ ಕಾರ್ತಿಕೇಶ್ ತಿಳಿಸಿದ್ದಾರೆ.

ಸದ್ಯ ಸೈಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಓಂ ಪ್ರಕಾಶ್ ಅವರ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ. ಇದಾದ ಬಳಿಕ ಅಂತಿಮ ದರುಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಹಿರಿಯ ಐಪಿಎಸ್ ಅಧಿಕಾರಿಗಳು, ಸಹೋದ್ಯೋಗಿಗಳು, ಕುಟುಂಬದ ಆಪ್ತರು ಪಾರ್ಥಿವ ಶರೀರದ ಅಂತಿಮ ದರುಶನ ಪಡೆಯಲಿದ್ದಾರೆ.

ಮತ್ತೊಂದೆಡೆ ಓಂ ಪ್ರಕಾಶ್ ಅವರ ಪತ್ನಿ ಪಲ್ಲವಿ ಹಾಗೂ ಪುತ್ರಿ ಕೃತಿ ಅವರನ್ನು ವಶಕ್ಕೆ ಪಡೆದಿರುವ ಹೆಚ್ಎಸ್ಆರ್ ಲೇಔಟ್ ಠಾಣೆ ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ. ಇಬ್ಬರ ಹೇಳಿಕೆ ದಾಖಲಿಸುತ್ತಿರುವ ಪೊಲೀಸರು ಮಧ್ಯಾಹ್ನದ ನಂತರ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

ರಾಜ್ಯದ ನಿವೃತ್ತ ಪೊಲೀಸ್ ಮಹಾನಿರ್ದೇಶಕರಾಗಿದ್ದ ಓಂ ಪ್ರಕಾಶ್ ಅವರನ್ನು ಹತ್ಯೆ ಮಾಡಲಾಗಿದ್ದು, ನಗರದ ಹೆಚ್ಎಸ್ಆರ್ ಲೇಔಟ್‌ನ ಮನೆಯಲ್ಲಿ ಭಾನುವಾರ ರಕ್ತದ ಮಡುವಿನಲ್ಲಿ ಮೃತದೇಹ ಪತ್ತೆಯಾಗಿತ್ತು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!