ಹೊಸ ದಿಗಂತ ಡಿಜಿಟಲ್ ಡೆಸ್ಕ್
ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರನ್ನು ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ನಗರದ ಗಂಟ್ಮುಲ್ಲಾ ಬಾರಾಮುಲ್ಲಾ ಪ್ರದೇಶದ ಮಸೀದಿಯಲ್ಲಿ ನಿವೃತ್ತ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್ಎಸ್ಪಿ) ಮೊಹಮ್ಮದ್ ಶಫಿ ಪ್ರಾರ್ಥನೆ ಮಾಡುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
ಘಟನೆ ಬಳಿಕ ಪೊಲೀಸರು ಆ ಪ್ರದೇಶವನ್ನು ಸುತ್ತುವರಿದಿದ್ದರು. ಈ ಸಂಬಂಧ ಮಾಹಿತಿ ನೀಡಿದ ಕಾಶ್ಮೀರ ವಲಯ ಪೊಲೀಸರು, ಮಸೀದಿಯಲ್ಲಿ ಅಜಾನ್ ಪ್ರಾರ್ಥನೆ ಮಾಡುತ್ತಿದ್ದಾಗ ಗಂಟ್ಮುಲ್ಲಾ, ಶೀರಿ ಬಾರಾಮುಲ್ಲಾದಲ್ಲಿ ನಿವೃತ್ತ ಪೊಲೀಸ್ ಅಧಿಕಾರಿ ಶ್ರೀ ಮೊಹಮ್ಮದ್ ಶಫಿ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿ ಗಾಯಗೊಂಡರು. ಪ್ರದೇಶವನ್ನು ಸುತ್ತುವರಿಯಲಾಗಿದೆ.