ಹೊಸದಿಗಂತ ಡಿಜಿಟಲ್ ಡೆಸ್ಕ್:
ನನ್ನ ಜೀವನದಲ್ಲಿ ಹೊಂದಾಣಿಕೆ ರಾಜಕಾರಣ ಮಾಡಿಲ್ಲ, ಒಂದು ವೇಳೆ ಮಾಡಿರುವುದು ಸಾಬೀತಾದರೆ ರಾಜಕೀಯ ನಿವೃತ್ತಿ ಪಡೆಯುವುದಾಗಿ ಸಿಎಂ ಸಿದ್ದರಾಮಯ್ಯ ಸವಾಲ್ ಹಾಕಿದ್ದಾರೆ.
ಇಂದು ವಿಧಾನಸೌಧದಲ್ಲಿ ಪ್ರತಿಪಕ್ಷಗಳ ಹೇಳಿಕೆಗೆ ತಿರುಗೇಟು ನೀಡಿದ ಅವರು, 1983 ರಿಂದ ಸದನದಲ್ಲಿದ್ದೇನೆ, ನನ್ನ ಜತೆ ಸದನಕ್ಕೆ ಬಂದವರಲ್ಲಿ ಬಿ.ಆರ್ ಪಾಟೀಲ್, ದೇಶ್ಪಾಂಡೆ ಬಿಟ್ಟು ಬೇರೆಯವರ್ಯಾರು ಇಲ್ಲ, ಅಂದಿನಿಂದ ಇಲ್ಲಿಯವರೆಗೆ ಎಂದಿಗೂ ಹೊಂದಾಣಿಕೆ ರಾಜಕಾರಣ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.
ನಾನು ವಿರೋಧ ಪಕ್ಷದಲ್ಲಿದ್ದಾಗ ಯಾವುದೇ ಸಚಿವರ ಮನೆಗೆ ಹೋಗಿದ್ದಾಗಲಿ, ಹೊಂದಾಣಿಕೆ ಮಾಡಿಕೊಂಡಿದ್ದಾಗಲಿ ಸಾಬೀತು ಮಾಡಿದರೆ ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ ಎಂದು ಸವಾಲ್ ಹಾಕಿದರು.