ಹೊಸದಿಗಂತ ಡಿಜಿಟಲ್ ಡೆಸ್ಕ್:
ಹೆಚ್.ಡಿ.ರೇವಣ್ಣ ಅವರಿಗೆ ಈಗ ಮತ್ತೊಂದು ಸವಾಲು ಎದುರಾಗಿದ್ದು, ಲೈಂಗಿಕ ಕಿರುಕುಳ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿದ್ದಾರೆ.
ಈ ಪ್ರಕರಣದಲ್ಲಿ ಆರೋಪಿಯಾಗಿ ಬಂಧಿತರಾಗಿದ್ದು, ಇದೀಗ ಜೆಡಿಎಸ್ ಹಾಲಿ ಹಾಗೂ ಮಾಜಿ ಶಾಸಕರು ಸೇರಿದಂತೆ ಹಲವು ಮುಖಂಡರು ರೇವಣ್ಣ ಅವರನ್ನು ಪಕ್ಷದಿಂದ ಕೈಬಿಡುವಂತೆ ಒತ್ತಾಯಿಸುತ್ತಿದ್ದು, ಇಂದು ಈ ಬಗ್ಗೆ ಮಹತ್ವದ ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ.
ಇಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡರು ಮಹತ್ವದ ಸಭೆ ನಡೆಸಲಿದ್ದು, ರೇವಣ್ಣ ಅವರನ್ನು ಪಕ್ಷದಿಂದ ತೆಗೆದುಹಾಕಲಾಗುವುದು ಎಂದು ವರದಿಯಾಗಿದೆ. ಪ್ರಕರಣದಿಂದ ಪಕ್ಷಕ್ಕೆ ಮುಜುಗರ ಉಂಟಾಗಿದ್ದು, ಸಮಸ್ಯೆ ಇತ್ಯರ್ಥಕ್ಕೆ ಅಮಾನತಿನಂತಹ ಶಿಸ್ತು ಕ್ರಮದ ಅಗತ್ಯವಿದೆ ಎಂದು ಹಲವು ಮುಖಂಡರು ಹೇಳಿದ್ದಾರೆ ಎನ್ನಲಾಗಿದೆ.