ಹೊಸದಿಗಂತ ವರದಿ, ಮಡಿಕೇರಿ:
ಕಂದಾಯ ಸಚಿವ ಆರ್.ಅಶೋಕ್ ಅವರು ಗುರುವಾರ ಜಿಲ್ಲೆಯ ವಿವಿಧೆಡೆ ಸಂಭವಿಸಿರುವ ಭೂಕುಸಿತ ಹಾಗೂ ಭೂಕಂಪನ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಕರ್ತೋಜಿ ಎಂಬಲ್ಲಿ ಉಂಟಾಗಿರುವ ಭೂಕುಸಿತ ಪ್ರದೇಶಕ್ಕೆ ಭೇಟಿ ನೀಡಿ ವೀಕ್ಷಿಸಿದ ಅವರು, ಸಂಪಾಜೆ, ಚೆಂಬು ಗ್ರಾಮಗಳಲ್ಲಿನ ಮನೆ ಹಾನಿ ಹಾಗೂ ಭೂ ಕುಸಿತ ವೀಕ್ಷಣೆ ಮಾಡಿ ಗ್ರಾಮಸ್ಥರೊಂದಿಗೆ ಚರ್ಚೆ ನಡೆಸಿದರು.
ಭೂಕಂಪನ ಮಾಪನ ಅಳವಡಿಸಿರುವ ಶಾಲೆಗೂ ಭೇಟಿ ನೀಡಿ ಪರಿಶೀಲಿಸಿದ ಆರ್.ಅಶೋಕ್ ಅವರು, ಭೂಕಂಪನದ ಅಧ್ಯಯನ ನಡೆಸಲು ರಾಜ್ಯದಿಂದ ಆಗಮಿಸಿರುವ ವೈಜ್ಞಾನಿಕ ಸಮಿತಿಯೊಂದಿಗೂ ಚರ್ಚಿಸಿದರು.
ಸಂಪಾಜೆ, ಅರಂತೋಡು ಭೂಕಂಪನ ಪ್ರದೇಶಗಳಿಗೂ ಭೇಟಿ ನೀಡಿ ಅವರು ಪರಿಶೀಲನೆ ನಡೆಸಿದರು.
ಶಾಸಕ ಕೆ.ಜಿ.ಬೋಪಯ್ಯ, ರಾಜ್ಯ ಪಶ್ಚಿಮಘಟ್ಟ ಸಂರಕ್ಷಣಾ ಕಾರ್ಯಪಡೆ ಸಮಿತಿ ಅಧ್ಯಕ್ಷ ರವಿ ಕುಶಾಲಪ್ಪ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಮತ್ತಿತರರು ಇದ್ದರು.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ