ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಭೂಗತ ದೊರೆ, ಮುತ್ತಪ್ಪ ರೈ ಅವರ ಮಗ ರಿಕ್ಕಿ ರೈ ಮೇಲಿನ ಗುಂಡಿನ ದಾಳಿಯ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಮಂದಿ ವಿರುದ್ಧ ಈಗ ಎಫ್ಐಆರ್ ದಾಖಲಾಗಿದೆ.
ಸದ್ಯ ರಿಕ್ಕಿ ರೈ ಮೇಲೆ ದಾಳಿ ಮಾಡಿದ ಶಾರ್ಪ್ ಶೂಟರ್ಗಳು ಮತ್ತು ಆರೋಪಿಗಳಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ರಿಕ್ಕಿ ರೈ ಕಾರು ಚಾಲಕ ಬಸವರಾಜ್ ನೀಡಿದ ದೂರಿನ ಆಧಾರದಲ್ಲಿ ಮುತ್ತಪ್ಪ ರೈ ಆಪ್ತನಾಗಿದ್ದ ರಾಕೇಶ್ ಮಲ್ಲಿ, ಮುತ್ತಪ್ಪ ರೈ ಎರಡನೆ ಪತ್ನಿ ಅನುರಾಧ, ಎಸ್ಟೇಟ್ ಮಾಲೀಕ ನಿತೀಶ್ ಶೆಟ್ಟಿ ಮತ್ತು ವೈದ್ಯನಾಥ ಎಂಬುವರ ಮೇಲೆ ದೂರು ದಾಖಲಾಗಿದೆ.
ಎರಡು ದಿನಗಳ ಹಿಂದೆ ರಿಕ್ಕಿ ರೈ ರಷ್ಯಾ ದಿಂದ ಬೆಂಗಳೂರಿಗೆ ಬಂದಿದ್ದರು. ಬೆಂಗಳೂರಿಗೆ ಕರೆಸಿ ಮಹೂರ್ತಾ ಫಿಕ್ಸ್ ಮಾಡಿದ್ರಾ ರಾಕೇಶ್ ಮಲ್ಲಿ ಹಾಗೂ ಅನುರಾಧ ಟೀಂ ಅನ್ನೋ ಅನುಮಾನ ಪೊಲೀಸರಿಗಿದೆ.
ಅಪ್ಪನ ಆಸ್ತಿ ವಿಚಾರವಾಗಿ ಹಲವು ವಿವಾದ ಇತ್ತು. ಮುತ್ತಪ್ಪ ರೈ ಎರಡನೇ ಪತ್ನಿ ಅನುರಾಧ, ರಾಕೇಶ್ ಮಲ್ಲಿ ಹಾಗೂ ಇತರರ ಜೊತೆ ರಿಕ್ಕಿ ರೈ ಭಿನ್ನಾಭಿಪ್ರಾಯ ಇತ್ತು. ಇದಕ್ಕೆ ಸಂಬಂಧಿಸಿದಂತೆ ವಿವಾದ ಬಗೆ ಹರಿಸಿಕೊಳ್ಳುವ ಯತ್ನದಲ್ಲಿದ್ರು ಇದೇ ಕಾರಣಕ್ಕೆ ಬೆಂಗಳೂರಿಗೆ ಬಂದಿದ್ದಾರೆ. ಹಣಕಾಸಿನ ವಿಚಾರವಾಗಿ ಫೈನಲ್ ಸೆಟಲ್ ಮೆಂಟ್ ಗೆ ಬಂದಿದ್ದ ವೇಳೆ ಈ ಘಟನೆ ನಡೆದಿದೆಯಾ? ಎನ್ನುವ ಅನುಮಾನವಿದೆ.