ಹೊಸದಿಗಂತ ಡಿಜಿಟಲ್ ಡೆಸ್ಕ್:
ಟೀಮ್ ಇಂಡಿಯಾ ಆಟಗಾರ ರಿಷಭ್ ಪಂತ್ಅವರನ್ನು ಬಾಲಿವುಡ್ನ ಹಿರಿಯ ನಟರಾದ ಅನುಪಮ್ ಖೇರ್ ಮತ್ತು ಅನಿಲ್ ಕಪೂರ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.
ಪಂತ್ ಭೇಟಿ ಬಳಿಕ ಮಾತನಾಡಿದ ಅನಿಲ್ ಕಪೂರ್, ರಿಷಭ್ ಪಂತ್ ಚಿಕಿತ್ಸೆಗೆ ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ. ಶೀಘ್ರ ಗುಣಮುಖರಾಗಿ ಅವರು ಮತ್ತೆ ಕ್ರಿಕೆಟ್ ಅಂಗಳಕ್ಕೆ ಮರಳುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.
ಅಪಘಾತದ ಪೋಟೊಗಳನ್ನು ಕಂಡು ನಾನು ಗಾಬರಿಯಾದೆ. ಅದೃಷ್ಟವಶಾತ್ ಪಂತ್ ಜೀವಾಪಾಯದಿಂದ ಪಾರಾಗಿದ್ದಾರೆ. ಎಲ್ಲ ದೇವರ ಆಶೀರ್ವಾದ. ಆದ್ದರಿಂದ ದೊಡ್ಡ ಅವಘಟ ತಪ್ಪಿಹೋಗಿದೆ. ಸದ್ಯ ಪಂತ್ ಉತ್ತಮ ಚೇತರಿಕೆ ಕಾಣುತ್ತಿದ್ದಾರೆ ಎಂದು ಅನುಪಮ್ ಖೇರ್ ಹೇಳಿದ್ದಾರೆ.
ಶುಕ್ರವಾರ ಉತ್ತರಾಖಂಡದ ರೂರ್ಕಿಯಲ್ಲಿರುವ ತಮ್ಮ ಮನೆಗೆ ಪಂತ್ ಪ್ರಯಾಣಿಸುತ್ತಿದ್ದ ವೇಳೆ ಕಾರು ಅಪಘಾತ ಸಂಭವಿಸಿ ಗಂಭೀರ ಗಾಯಗೊಂಡಿದ್ದರು.