ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾರು ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಟೀಂ ಇಂಡಿಯಾ ಆಟಗಾರ ರಿಷಭ್ ಪಂತ್ರನ್ನು ಚೇತರಿಸಿಕೊಳ್ಳುತ್ತಿದ್ದು, ಹೀಗಾಗಿ ಸದ್ಯ ಯಾರು ಅವರನ್ನು ನೋಡಲು ಆಸ್ಪತ್ರೆಗೆ ತೆರಳಬೇಡಿ ಎಂದು ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಅಸೋಸಿಯೇಷನ್ (DDCA) ನಿರ್ದೇಶಕ ಶಾಮ್ ಶರ್ಮಾ ಮನವಿ ಮಾಡಿಕೊಂಡಿದ್ದಾರೆ.
ಪಂತ್ ಇದೀಗ ಡೆಹ್ರಾಡೂನ್ನ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಪಂತ್ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ. ಈ ನಡುವೆ ಪಂತ್ರನ್ನು ನೋಡಲು ಸಾಕಷ್ಟು ಗಣ್ಯರು ಆಸ್ಪತ್ರೆಯತ್ತ ಬರುತ್ತಿದ್ದಾರೆ. ಹೀಗಾಗಿ ಈ ಒಂದು ಮನವಿ ಮಾಡಿದ್ದಾರೆ.
ರಸ್ತೆಯಲ್ಲಿದ್ದ ಗುಂಡಿ ತಪ್ಪಿಸಲು ಹೋಗಿ ಅಪಘಾತ ನಡೆದಿದೆ. ಈ ಬಗ್ಗೆ ಪಂತ್ ಜೊತೆ ನಾನು ಮಾತನಾಡಿದ್ದೇನೆ. ಸದ್ಯ ಪಂತ್ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಬಿಸಿಸಿ ವೈದ್ಯರ ತಂಡ, ಜಯ್ ಶಾ ಮ್ಯಾಕ್ಸ್ ಆಸ್ಪತ್ರೆಯ ವೈದ್ಯರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಚಿಕಿತ್ಸೆಯ ಕುರಿತಾಗಿ ಮಾಹಿತಿ ಪಡೆಯುತ್ತಿದ್ದಾರೆ. ಇದರ ನಡುವೆ ಯಾರು ಭೇಟಿ ನೀಡುವ ಪ್ರಯತ್ನ ಮಾಡಬೇಡಿ . ಇದರಿಂದ ಅವರಿಗೆ ಸೋಂಕು ಹರಡುವ ಸಾಧ್ಯತೆ ಹೆಚ್ಚಿದೆ ಎಂದು ತಿಳಿಸಿದ್ದಾರೆ.