ಹೆಚ್ಚಿನ ಚಿಕಿತ್ಸೆಗಾಗಿ ರಿಷಬ್ ಪಂತ್ ಇಂದು ಮುಂಬೈಗೆ ಸ್ಥಳಾಂತರ: ಡಿಡಿಸಿಎ ನಿರ್ದೇಶಕ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಭಾರತೀಯ ವಿಕೆಟ್‌ಕೀಪರ್-ಬ್ಯಾಟರ್ ರಿಷಬ್ ಪಂತ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬುಧವಾರ ಮುಂಬೈಗೆ ಸ್ಥಳಾಂತರಿಸಲಾಗುವುದು ಎಂದು ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಸ್ಥೆ (ಡಿಡಿಸಿಎ) ನಿರ್ದೇಶಕ ಶ್ಯಾಮ್ ಶರ್ಮಾ ಬುಧವಾರ ತಿಳಿಸಿದ್ದಾರೆ. “ನಾನು ಅವರ ತಾಯಿಯೊಂದಿಗೆ ಸಂಪರ್ಕದಲ್ಲಿದ್ದೇನೆ. ಅವರ ಅಸ್ಥಿರಜ್ಜು ಬಹಳ ಪೆಟ್ಟಾಗಿದ್ದು ಹೆಚ್ಚಿನ ಸಹಾಯಕ್ಕಾಗಿ ನಾವು ಅವರನ್ನು ಮುಂಬೈಗೆ ಸ್ಥಳಾಂತರಿಸುತ್ತೇವೆ” ಎಂದು ಡಿಡಿಸಿಎ ನಿರ್ದೇಶಕ ಶ್ಯಾಮ್ ಶರ್ಮಾ ತಿಳಿಸಿದ್ದಾರೆ.

ಡಿಸೆಂಬರ್ 30 ರಂದು ನಡೆದ ಕಾರು ಅಪಘಾತದ ನಂತರ ರಿಷಬ್ ಪಂತ್ ಪ್ರಸ್ತುತ ಡೆಹ್ರಾಡೂನ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಟಾರ್ ಕ್ರಿಕೆಟಿಗ ರಿಷಬ್ ಪಂತ್ ಅವರ ಜೀವ ಉಳಿಸಿದ ಹರಿಯಾಣ ರೋಡ್‌ವೇಸ್‌ನ ಚಾಲಕ ಮತ್ತು ನಿರ್ವಾಹಕರನ್ನು ಗಣರಾಜ್ಯೋತ್ಸವದಂದು ತಮ್ಮ ಸರ್ಕಾರ ಗೌರವಿಸಲಿದೆ ಎಂದು ಧಮಿ ಭಾನುವಾರ ಘೋಷಿಸಿದ್ದಾರೆ.

ಪಂತ್‌ ನೋಡಲು ಭೇಟಿ ನೀಡುತ್ತಿರುವವರ ಸಂಖ್ಯೆಯೂ ಹೆಚ್ಚಾಗಿರುವುದರಿಂದ ಸೋಂಕು ತಗುಲಿವ ಭೀತಿ ಎದುರಾಗಿದೆ ಹಾಗಾಗಿ ಅವರನ್ನು ವಿಸೇಷ ವಾರ್ಡ್‌ಗೆ ಶಿಫ್ಟ್‌ ಮಾಡಲಾಗಿದ್ದು, ಇಂದು ಹೆಚ್ಚಿನ ಚಿಕಿತ್ಸೆಗಾಗಿ ಮುಂಬೈಗೆ ಶಿಫ್ಟ್‌ ಮಾಡಲಾಗುವುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!