ಕಾಂತಾರ ಸಕ್ಸೆಸ್‌|‌ ಪಂಜುರ್ಲಿ ದೈವದ ಹರಕೆ ತೀರಿಸಿದ ರಿಷಬ್‌ ಮತ್ತು ಚಿತ್ರತಂಡ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕಳೆದ ವರ್ಷ ಬಿಡುಗಡೆಯಾದ ದಕ್ಷಿಣ ಕನ್ನಡ ದೈವದ ಕಥೆ ʻಕಾಂತಾರʼ ನಿರೀಕ್ಷೆಗೂ ಮೀರಿದ ದೊಡ್ಡ ಯಶಸ್ಸನ್ನು ತಂದುಕೊಟ್ಟ ಹಿನ್ನೆಲೆಯಲ್ಲಿ ನಟ. ನಿರ್ದೇಶಕ ರಿಷಬ್‌ ಶೆಟ್ಟಿ ಕುಟುಂಬ ಹಾಗೂ ಚಿತ್ರತಂಡ ಪಂಜುರ್ಲಿ ದೈವದ ಹರಕೆ ತೀರಿಸಿದೆ. ಹರಕೆ ತೀರಿಸುವ ವೇಳೆ ಇಡೀ ಕಾಂತಾರ ತಂಡ ಮಂಗಳೂರಿನಲ್ಲಿ ನಡೆದ ಭೂತಕೋಲದಲ್ಲಿ ಭಾಗಿಯಾಗಿದ್ದರು.

ನಿರ್ಮಾಪಕ ವಿಜಯ್ ಕಿರಂಗದೂರು, ರಿಷಬ್ ಶೆಟ್ಟಿ, ಪತ್ನಿ ಪ್ರಗತಿ ಶೆಟ್ಟಿ, ನಾಯಕಿ ಸಪ್ತಮಿ ಗೌಡ, ಕಾರ್ತಿಕ್ ಗೌಡ, ಸೇರಿದಂತೆ ಇಡೀ ಚಿತ್ರತಂಡ ಭಾಗಿಯಾಗಿದ್ದರು. ದೈವ ನರ್ತಕ ಇಡೀ ತಂಡವನ್ನು ಪ್ರೀತಿಯಿಂದ ಅಪ್ಪಿಕೊಂಡ ದೃಶ್ಯ ರೋಮಾಂಚನಕಾರಿಯಾಗಿ ಕಂಡಿದೆ.  ದೇವಕ್ಕೆ ಹರಕೆ ತೀರಿಸುವ ಕ್ಷಣವನ್ನು ಹೊಂಬಾಳೆ ಫಿಲ್ಸಂ ವಿಡಿಯೋ ಬಿಡುಗಡೆ ಮಾಡಿದೆ.

ರಾಜ್ಯ ಮಾತ್ರವಲ್ಲದೆ, ಪ್ಯಾನ್‌ ಇಂಡಿಯಾ ಸಿನಿಮಾವಾಗಿ ಕಾಂತಾರ ತೆರೆಕಂಡಿದೆ. ಸೌತ್‌ ಸಿನಿಮಾ ರಂಗ ಮಾತ್ರವಲ್ಲದೆ, ಉತ್ತರದ ಬಾಲಿವುಡ್‌ ಮಂದಿ ಕೂಡ ಕಾಂತಾರ ಕಂಡು ಬೆರಗಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!