ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಶ್ವದಾದ್ಯಂತ ಕಾಂತಾರ ಯಶಸ್ಸು ಸದ್ದು ಮಾಡುತ್ತಿದ್ದು, ಇದರ ಬೆನ್ನಲ್ಲೇ ರಿಷಬ್ ಶೆಟ್ಟಿ ಮತ್ತು ಪ್ರಗತಿ ಶೆಟ್ಟಿ ಕಟೀಲಿಗೆ ಭೇಟಿ ನೀಡಿ ತಾಯಿ ದುರ್ಗಾಪರಮೇಶ್ವರಿ ದೇವರ ದರುಶನ ಪಡೆದಿದ್ದಾರೆ.
ಕಾಂತಾರ ಸಿನಿಮಾ ಎಲ್ಲೆಡೆ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು, ಒಟಿಟಿಯಲ್ಲಿಯೂ ಸದ್ದು ಮಾಡುತ್ತಿದೆ. ರಿಷಬ್ ಹಾಗೂ ಪ್ರಗತಿ ಶೆಟ್ಟಿ ಸಿನಿಮಾ ಯಶಸ್ಸಿನ ನಂತರ ಸಾಕಷ್ಟು ದೇವಾಲಯಗಳಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ.