ಹೊಸದಿಗಂತ ವರದಿ,ಹಲಗೂರು :
ಚಲಿಸುತ್ತಿದ್ದ ಬೈಕ್ ನಿಂದ ಅಯತಪ್ಪಿ ಬಿದ್ದು ಯುವಕನೊಬ್ಬ ಮೃತಪಟ್ಟ ಘಟನೆ ಸಮೀಪದ ಬಸವನ ಪುರ ಗ್ರಾಮದ ಬಳಿ ಇರುವ ಪೆಟ್ರೋಲ್ ಬಂಕ್ ಬಳಿ ಸೋಮವಾರ ರಾತ್ರಿ ನಡೆದಿದೆ.
ಹಲಗೂರು ಸಮೀಪದ ಅಣ್ಣಹಳ್ಳಿ ಗ್ರಾಮದ ನಿವಾಸಿ ಮಾದೇಗೌಡ ರವರ ಪುತ್ರ ಕುಮಾರಸ್ವಾಮಿ (23) ಮೃತ ಯುವಕ.
ತನ್ನ ಬೈಕ್ಗೆ ಪೆಟ್ರೋಲ್ ತುಂಬಿಸಿ ಕೊಂಡು ಸ್ವಗ್ರಾಮಕ್ಕೆ ಹಿಂದಿರುಗುವಾಗ ಅಯತಪ್ಪಿ ಆಕಸ್ಮಿಕವಾಗಿ ಕೆಳಗೆ ಬಿದ್ದಿದ್ದಾನೆ. ತಲೆಗೆ ತೀವ್ರ ಪೆಟ್ಟಾದ ಪರಿಣಾಮ ತೀವ್ರ ರಕ್ತಸ್ರಾವವಾಗಿದ್ದ ಈತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಮಂಗಳವಾರ ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟನು. ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ವಾರಸು ದಾರರಿಗೆ ನೀಡಲಾಯಿತು.
ಈ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.