ಚಿಂಚೋಳಿಯಲ್ಲಿ ರಸ್ತೆ ಅಪಘಾತ: ಬೈಕ್ ಸವಾರ ಸಾವು

ಹೊಸದಿಗಂತ ವರದಿ, ಕಲಬುರಗಿ:

ಟಂಟಂ – ಬೈಕ್ ಮಧ್ಯೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚಿಂಚೋಳಿ ತಾಲೂಕಿನ ಮಿರಿಯಾಣ ಬಳಿ ನಡೆದಿದೆ.

ಸರ್ಫರಾಜ್ ಸೈಯದ್ (25) ಮೃತ ಬೈಕ್ ಸವಾರ.
ಚೆಟ್ಟಿನಾಡ ಸಿಮೆಂಟ್ ಕಂಪನಿಯಲ್ಲಿ ಕೆಲಸ ಮಾಡ್ತಿದ್ದ ಸೈಯದ್, ಕೆಲಸ ಮುಗಿಸಿಕೊಂಡು ತಾಂಡೂರಿಗೆ ಹೋಗುವಾಗ ಈ ಅವಘದ ಸಂಭವಿಸಿದೆ.

ಟಂಟಂ ರಭಸವಾಗಿ ಬಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.ಮಿರಿಯಾಣ ‌ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!