ಹೊಸದಿಗಂತ ಡಿಜಿಟಲ್ ಡೆಸ್ಕ್:
ರಸ್ತೆ ಬದಿಯಲ್ಲಿ ಬಸ್ಗಾಗಿ ಕಾಯುತ್ತಿದ್ದ ಜನರ ಮೇಲೆ ಟ್ರಕ್ ಹರಿದ ಪರಿಣಾಮವಾಗಿ ಆರು ಜನರು ಸಾವನ್ನಪ್ಪಿ, ಇತರ ಹತ್ತು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ರತ್ಲಾಮ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ರತ್ಲಂ ಜಿಲ್ಲೆಯ ಸತ್ರುಂಡಾ ಬಳಿಯ ರತ್ಲಂ-ಇಂದೋರ್ ನಾಲ್ಕು ಪಥ ರಸ್ತೆಯಲ್ಲಿ ಕೆಲವರು ಬಸ್ಸಿಗಾಗಿ ಕಾಯುತ್ತಿದ್ದಾರೆ.
ಅದೇ ವೇಳೆ ವೇಗವಾಗಿ ಬರುತ್ತಿದ್ದ ಟ್ರಕ್ ಟೈರ್ ಒಡೆದು ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ. ಪರಿಣಾಮ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನು ಹತ್ತು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ರಕ್ತದ ಕಲೆಗಳೊಂದಿಗೆ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದ ದೇಹಗಳ ದೃಶ್ಯ ಭಯಾನಕ ದೃಶ್ಯವಾಗಿ ಮಾರ್ಪಟ್ಟಿತು. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಾಹಿತಿ ಪಡೆದ ಜಿಲ್ಲಾಧಿಕಾರಿ ಹಾಗೂ ಎಸ್ಪಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಗಾಯಾಳುಗಳನ್ನು ಚಿಕಿತ್ಸೆಗಾಗಿ ರತ್ಲಂ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ. ಅಪಘಾತದ ನಂತರ ಚಾಲಕ ಲಾರಿ ಬಿಟ್ಟು ಓಡಿ ಹೋಗಿದ್ದಾನೆ. ಈ ಘಟನೆಗೆ ರಾಜ್ಯ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ತೀವ್ರ ದುಃಖ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ಸಾಂತ್ವ ಹೇಳಿದ್ದಾರೆ.