ಬದರಿನಾಥದಲ್ಲಿ ಭಾರೀ‌ ಭೂಕುಸಿತ: ರಾಷ್ಟ್ರೀಯ ಹೆದ್ದಾರಿ ವಾಹನ ಸಂಚಾರ ಬಂದ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ನಂದಪ್ರಯಾಗ ಮತ್ತು ಚಿಂಕಾ ಬಳಿ ಗುಡ್ಡ ಕುಸಿತವಾಗಿ ಬದರಿನಾಥ್ ರಾಷ್ಟ್ರೀಯ ಹೆದ್ದಾರಿ ಬಂದ್‌ ಆಗಿದೆ. ಗುರುವಾರ ಬೆಳ್ಳಂಬೆಳಗ್ಗೆ ಗುಡ್ಡ ಕುಸಿತವಾಗಿರುವ ಬಗ್ಗೆ ಅಧಿಕಾರಿಗಳು ಸ್ಪಷ್ಟಪಡಿಸಿದ್ದು, ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.

ಚಮೋಲಿ ಪೊಲೀಸರು ಸ್ಥಳದ ದೃಶ್ಯಗಳನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದು, ರಸ್ತೆಯಲ್ಲಿ ಬೃಹತ್ ಅವಶೇಷಗಳ ರಾಶಿ ಕಂಡುಬಂದಿದೆ.

ಮಂಗಳವಾರ ಮುಂಜಾನೆಯೂ ಬದರಿನಾಥ್ ರಾಷ್ಟ್ರೀಯ ಹೆದ್ದಾರಿಯ ಪಿಪಾಲ್ಕೋಟಿ ಬಳಿ ರಸ್ತೆಯು ಗುಡ್ಡ ಕುಸಿತದ ಅವಶೇಷಗಳಿಂದಾಗಿ ಮುಚ್ಚಲ್ಪಟ್ಟಿತ್ತು.

ಉತ್ತರಾಖಂಡ್‌ನ ಉತ್ತರಕಾಶಿ ಜಿಲ್ಲೆಯ ಗಂಗೋತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಚುಂಗಿ ಬಡೇತಿ ಸುರಂಗಕ್ಕೂ ಭೂಕುಸಿತ ಅಪಾಯ ಹೆಚ್ಚಿದೆ.

ಈ ಕುರಿತು ಜಿಲ್ಲಾ ವಿಪತ್ತು ನಿರ್ವಹಣಾ ಅಧಿಕಾರಿ ದೇವೇಂದ್ರ ಪಟ್ವಾಲ್ ಸುರಂಗದ ಸುರಕ್ಷತೆಯ ಬಗ್ಗೆ ಸಂಬಂಧಪಟ್ಟ ಕಾರ್ಯನಿರ್ವಾಹಕ ಸಂಸ್ಥೆಯ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!