ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಕ್ರಿಕೆಟ್ ತಂಡ ಬಾಂಗ್ಲಾದೇಶಕ್ಕೆ ತೆರಳಿದ್ದು, ಏಕದಿನ ಟೆಸ್ಟ್ ಹಾಗೂ ಸರಣಿಗೆ ಸಜ್ಜಾಗುತ್ತಿವೆ. ಈ ಬೆನ್ನಲ್ಲೇ ಇಂದು ರೋಹಿತ್ ಶರ್ಮಾ ಸುದ್ದಿಗೋಷ್ಠಿ ಕರೆದಿದ್ದು, ಮಹತ್ವದ ಘೋಷಣೆಯಾಗುವ ಸಾಧ್ಯತೆ ಇದೆ. ಏಕದಿನ ಸರಣಿಗೆ ಆಯ್ಕೆಯಾಗಿರುವ ಎಲ್ಲ ಆಟಗಾರರು ಢಾಕಾದಲ್ಲಿ ಭರ್ಜರಿ ಅಭ್ಯಾಸ ನಡೆಸುತ್ತಿದ್ದಾರೆ.
ಮುಖ್ಯವಾಗಿ ಉಪ ನಾಯಕ ಕೆ.ಎಲ್. ರಾಹುಲ್ ಫಾರ್ಮ್ ಬಗ್ಗೆ ಪ್ರಶ್ನೆಗಳು ಏಳಲಿವೆ. ಕಳೆದ ಕೆಲ ಪಂದ್ಯಗಳಿಂದ ರಾಹುಲ್ ಉತ್ತಮ ಪ್ರದರ್ಶನ ನೀಡಿಲ್ಲ. ರಾಹುಲ್ ಸ್ಥಾನದ ಬಗ್ಗೆ ರೋಹಿತ್ ತೀರ್ಮಾನ ಏನು ಎನ್ನುವ ಬಗ್ಗೆ ಅಭಿಮಾನಿಗಳು ಕಾತರರಾಗಿದ್ದಾರೆ. ಇದರ ಜೊತೆಗೆ ಓಪನಿಂಗ್ ಬ್ಯಾಟರ್ಗಳ್ಯಾರು ಎನ್ನುವ ಮಾಹಿತಿಯೂ ಹೊರಬೀಳಲಿದೆ.