ಹೊಸ ದಿಗಂತ ಡಿಜಿಟಲ್ ಡೆಸ್ಕ್
ಏಷ್ಯಾಕಪ್ ಟೂರ್ನಿಯಲ್ಲಿ ಇಂದು ಭಾರತ ಶ್ರೀಲಂಕಾ ವಿರುದ್ಧ ತೀವ್ರ ಒತ್ತಡಕ್ಕೆ ಸಿಲುಕಿ ಬ್ಯಾಟಿಂಗ್ ನಡೆಸಿದೆ.
ಈ ಮಹತ್ವದ ಪಂದ್ಯದಲ್ಲಿ ರೋಹಿತ್ ಶರ್ಮಾ ಹಾಗೂ ಸೂರ್ಯಕುಮಾರ್ ಯಾದವ್ ಹೋರಾಟದಿಂದ ಟೀಂ ಇಂಡಿಯಾ 8 ವಿಕೆಟ್ ನಷ್ಟಕ್ಕೆ 173 ರನ್ ಸಿಡಿಸಿದೆ. ಶ್ರೀಲಂಕಾ ವಿರುದ್ಧ ಟಾಸ್ ಸೋತು ಬ್ಯಾಟಿಂಗ್ ಇಳಿದ ಟೀಂ ಇಂಡಿಯಾ ಆರಂಭದಲ್ಲಿ ಹಿನ್ನಡೆ ಅನುಭವಿಸಿತು. ಕೆಎಲ್ ರಾಹುಲ್ ಹಾಗೂ ವಿರಾಟ್ ಕೊಹ್ಲಿ ಬಹುಬೇಗನೆ ವಿಕೆಟ್ ಕೈಚೆಲ್ಲಿದರು. ಕೆಎಲ್ ರಾಹುಲ್ 6 ರನ್ ಸಿಡಿಸಿ ಔಟಾದರು. ಇತ್ತ ಕೊಹ್ಲಿ ಡಕೌಟ್ ಆದರು. ಆದರೆ ರೋಹಿತ್ ಶರ್ಮಾ ಹೋರಾಟದಿಂದ ಟೀಂ ಇಂಡಿಯಾ ಮತ್ತೆ ಪುಟಿದೆದ್ದಿತು. ಸೂರ್ಯಕುಮಾರ್ ಯಾದವ್ ಉತ್ತಮ ಸಾಥ್ ನೀಡಿದರು.
ರೋಹಿತ್ ಶರ್ಮಾ 41 ಎಸೆತದಲ್ಲಿ 5 ಬೌಂಡರಿ ಹಾಗೂ 4 ಸಿಕ್ಸರ್ ಮೂಲಕ 72 ರನ್ ಸಿಡಿಸಿ ಔಟಾದರು. ಇತ್ತ ಸೂರ್ಯಕುಮಾರ್ ಯಾದವ್ 29 ಎಸೆತದಲ್ಲಿ 34 ರನ್ ಸಿಡಿಸಿದರು. ಅಂತಿಮ ಹಂತದಲ್ಲಿ ಹಾರ್ದಿಕ್ ಪಾಂಡ್ಯ ಹಾಗೂ ರಿಷಬ್ ಪಂತ್ ಅಬ್ಬರಿಸಿದರು.
ಇದರಿಂದ ಟೀಂ ಇಂಡಿಯಾ ರನ್ ಗಳಿಕೆ ವೇಗ ಹೆಚ್ಚಿಸಿತು. ಆದರೆ ಹಾರ್ದಿಕ್ ಪಾಂಡ್ಯ 17 ರನ್ ಸಿಡಿಸಿ ಔಟಾದರು.
ದೀಪಕ್ ಹೂಡ ಕೇವಲ 3 ರನ್ ಸಿಡಿಸಿ ನಿರ್ಗಮಿಸಿದರು. ಪಂತ್ ಹೋರಾಟ 17 ರನ್ಗಳಿಗೆ ಅಂತ್ಯವಾಯಿತು.ಭುವನೇಶ್ವರ್ ಕುಮಾರ್ ಡಕೌಟ್ ಆದರು. ಆರ್ ಅಶ್ವಿನ್ ಅಜೇಯ 15 ರನ್ ಸಿಡಿಸಿದರು. ಈ ಮೂಲಕ ಟೀಂ ಇಂಡಿಯಾ 8 ವಿಕೆಟ್ ನಷ್ಟಕ್ಕೆ173 ರನ್ ಸಿಡಿಸಿತು.