ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಚಾಲಕನ ನಿಯಂತ್ರಣ ತಪ್ಪಿ ಕಾರು ಕೇರಳದ ತಿರುವಾತುಕ್ಕಲ್ನಲ್ಲಿರುವ ನದಿಗೆ ಉರುಳಿ ಬಿದ್ದಿರುವ ಘಟನೆ ನಡೆದಿದ್ದು, ಪವಾಡ ಸದೃಶ ರೀತಿಯಲ್ಲಿ ಆರು ತಿಂಗಳ ಮಗು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರು ನದಿಗೆ ಉರುಳಿ ಬಿದ್ದಿರುವ ಶಬ್ಧ ಕೇಳಿ ಸ್ಥಳೀಯರು ತಕ್ಷಣವೇ ಘಟನಾ ಸ್ಥಳಕ್ಕಾಗಮಿಸಿದ್ದರು. ಈ ಸಂದರ್ಭ ಕಾರು ನೀರಿನಲ್ಲಿ ತೇಲುತ್ತಿರುವುದು ಕಂಡುಬಂದಿದ್ದು, ಅದರೊಳಗೆ ಇದ್ದವರನ್ನು ರಕ್ಷಿಸಿ ಹೊರತೆಗೆದಿದ್ದಾರೆ.
ಜೋರಾಗಿ ಮಳೆಯಾಗುತ್ತಿದ್ದ ಕಾರಣ ಚಾಲಕನಿಗೆ ರಸ್ತೆ ಸರಿಯಾಗಿ ಕಾಣಿಸದ ಕಾರಣ ಕಾರು ನದಿಗೆ ಉರುಳಿದೆ ಎಂದು ಹೇಳಲಾಗ್ತಿದೆ. ಘಟನೆಯಲ್ಲಿ ಶಿಶು ಸೇರಿದಂತೆ ಯಾರಿಗೂ ಯಾವುದೇ ಗಾಯಗಳಾಗದೆ ಪಾರಾಗಿದ್ದಾರೆ. ಈ ಕುಟುಂಬ ಎರ್ನಾಕುಲಂನಿಂದ ತಿರುವಲ್ಲಾಗೆ ಪ್ರಯಾಣಿಸುತ್ತಿತ್ತು.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ