July 1, 2026
Wednesday, July 1, 2026
spot_img

BREAKING | ಮಂಗಳೂರಿನಲ್ಲಿ ಭಾರೀ ಮಳೆಗೆ ಕುಸಿದ ಮನೆಯ ಮೇಲ್ಛಾವಣಿ, ಇಬ್ಬರು ಮಕ್ಕಳು ಸೇರಿ ಮೂವರ ದುರ್ಮ*ರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಂಗಳವಾರ ರಾತ್ರಿಯಿಂದ ನಿರಂತರ ಮಳೆ ಸುರಿಯುತ್ತಿದ್ದ, ಕಂಕನಾಡಿಯಲ್ಲಿ ಭೀಕರ ದುರಂತ ಸಂಭವಿಸಿದೆ. ಇಂದು ಬೆಳಗಿನ ಜಾವ ಮನೆಯ ಮೇಲ್ಚಾವಣಿ ಹಾಗೂ ಗೋಡೆ ಕುಸಿದು ಬಿದ್ದಿದ್ದು, ಇಬ್ಬರು ಮಕ್ಕಳು ಸೇರಿ ಮೂವರು ಮೃತಪಟ್ಟಿದ್ದಾರೆ.

ಮನೆಯಲ್ಲಿ ಕುಟುಂಬದ ಆರು ಜನರು ಬೆಳಗಿನ ಜಾವದ ಸವಿನಿದ್ದೆಯಲ್ಲಿ ಇದ್ದರು. ಈ ವೇಳೆ ಏಕಾಏಕಿ ಭೂಕುಸಿತ ಸಂಭವಿಸಿದ್ದು, ಆರು ಮಂದಿ ಮಣ್ಣಿನಡಿ ಸಿಲುಕಿದ್ದಾರೆ. ಈ ವೇಳೆ ಒಬ್ಬರು ಪುರುಷ ಹಾಗೂ ಇಬ್ಬರು ಹೆಣ್ಣುಮಕ್ಕಳನ್ನು ರಕ್ಷಣೆ ಮಾಡಲಾಗಿದೆ. ಓರ್ವ ಮಹಿಳೆ ಹಾಗೂ ಇಬ್ಬರು ಹೆಣ್ಣುಮಕ್ಕಳು ಮೃತಪಟ್ಟಿದ್ದಾರೆ.

ತಕ್ಷಣವೇ ಸ್ಥಳೀಯರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿದ್ದು, ಅವಶೇಷಗಳ ಅಡಿ ಸಿಲುಕಿದ್ದ ಪುರುಷ ಹಾಗೂ ಇಬ್ಬರು ಬಾಲಕಿಯರನ್ನು ರಕ್ಷಿಸಿದ್ದಾರೆ. ಮಂಗಳವಾರ ರಾತ್ರಿಯಿಂದ ತಡೆವಿಲ್ಲದೆ ಸುರಿದ ಭಾರಿ ಮಳೆಯಿಂದಾಗಿ ಹಳೆಯದಾಗಿದ್ದ ಮನೆಯ ಗೋಡೆಗಳು ಸಂಪೂರ್ಣವಾಗಿ ತೇವಗೊಂಡು ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !