ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೊದಲ ಹಂತದಲ್ಲಿ ಪ್ರಮಾಣವಚನ ಸ್ವೀಕರಿಸಿರುವ ನೂತನ 13 ಸಚಿವರಿಗೆ ಕೊಠಡಿಗಳನ್ನು ಹಂಚಿಕೆ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶ ಹೊರಡಿಸಿದೆ.
ಆದೇಶದ ಪ್ರಕಾರ, ಕುಮಾರಕೃಪ ಅತಿಥಿ ಗೃಹವನ್ನು ಇನ್ನುಮುಂದೆ ಮುಖ್ಯಮಂತ್ರಿಗಳ ಗೃಹ ಕಚೇರಿಯಾಗಿ ಬಳಸಲಾಗುತ್ತದೆ. ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ನಾಲ್ಕು ಕೊಠಡಿಗಳನ್ನು ಹಂಚಿಕೆ ಮಾಡಲಾಗಿದ್ದು, ಈ ಹಿಂದೆ ಉಪಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್ ಅವರಿಗೆ ನೀಡಲಾಗಿದ್ದ ಕೊಠಡಿಯನ್ನೇ ಅವರಿಗೆ ನೀಡಲಾಗಿದೆ.
ಉಳಿದ ನೂತನ ಸಚಿವರಿಗೂ ಅವರ ಇಲಾಖೆಗಳ ಕಾರ್ಯನಿರ್ವಹಣೆಗೆ ಅನುಕೂಲವಾಗುವಂತೆ ಕೊಠಡಿಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಆದೇಶದಲ್ಲಿ ತಿಳಿಸಲಾಗಿದೆ.



