ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ವಿಶ್ವವಿದ್ಯಾಲಯ ಜ್ಞಾನಭಾರತಿ ಕ್ಯಾಂಪಸ್ ಆವರಣದ ರಸ್ತೆಗಳಲ್ಲಿ ಸರಣಿ ಅಪಘಾತ ಸಂಭವಿಸುತ್ತಿದ್ದು, ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ನಾಲ್ಕು ದಿಕ್ಕುಗಳಲ್ಲಿಯೂ ರಸ್ತೆಗಳಿಗೆ ಪೊಲೀಸರು ಬ್ಯಾರಿಕೇಡ್ ಹಾಕಿ ಪರಿಶೀಲಿಸುತ್ತಿದ್ದಾರೆ.
ಈ ಮಧ್ಯೆ ವಿದ್ಯಾರ್ಥಿಗಳ ಪ್ರತಿಭಟನೆ ತಾರಕಕ್ಕೇರಿದ್ದು, ಕ್ಯಾಂಪಸ್ನಲ್ಲಿ ವಾತಾರವಣ ಬೂದಿ ಮುಚ್ಚಿದ ಕೆಂಡದಂತಾಗಿದೆ. ಪ್ರತಿಭಟನೆ ಮಧ್ಯದಲ್ಲೆ ಅವೈಜ್ಞಾನಿಕ ಹಂಪ್ನಿಂದಾಗಿ ಮತ್ತೊಂದು ಅಪಘಾತ ಸಂಭವಿಸಿದೆ.
ಅಪಘಾತಗಳಿಂದ ವಿದ್ಯಾರ್ಥಿಗಳು ಸಂಕಷ್ಟ ಅನುಭವಿಸುತ್ತಿದ್ದಾರೆ. ಕೆಲವರು ತಮ್ಮ ಭವಿಷ್ಯವನ್ನೇ ಕಳೆದುಕೊಂಡಿದ್ದಾರೆ. ಮದ್ಯ ಸೇವಿಸಿ ಬರುವವರಿಗೆ ತಪಾಸಣೆ ಇಲ್ಲದೆ ಎಂಟ್ರಿ ನೀಡುವಂತಿಲ್ಲ. ವಿವಿ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶ ನೀಡಿ ಎಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.