ದಾವಣಗೆರೆಯಲ್ಲಿ ರೌಡಿಶೀಟರ್ ಮುಖಕ್ಕೆ ಪೆಪ್ಪರ್ ಸ್ಪ್ರೈ ಮಾಡಿ ಹತ್ಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಾವಣಗೆರೆ ನಗರದಲ್ಲಿ ಇಂದು ರೌಡಿಶೀಟರ್ ಸಂತೋಷ್ ಕುಮಾರ್ ಅಲಿಯಾಸ್ ಕಣುಮಾನ ಭೀಕರ ಹತ್ಯೆಯಾಗಿದೆ.

ದಾವಣಗೆರೆ ನಗರದ ಸೋಮೇಶ್ವರ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಮುಂಭಾಗ ಕೊಲೆಯಾಗಿದೆ. ರಿಯಲ್ ಎಸ್ಟೇಟ್ ಸೆಟಲ್ಮೆಂಟ್ ಮಾಡಿಕೊಂಡಿದ್ದ ರೌಡಿಶೀಟರ್ ಕಣುಮನನ್ನು ಆಟೋದಲ್ಲಿ ಬಂದ ನಾಲ್ಕೈದು ಜನರು ಕೊಚ್ಚಿ ಕೊಲೆ ಮಾಡಿದ್ದಾರೆ.‌

ಮೊದಲು ಮುಖಕ್ಕೆ ಪೆಪ್ಪರ್​ ಸ್ಪ್ರೇ ಹೊಡೆದು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಸ್ಥಳದಲ್ಲೇ ಸಂತೋಷ್ ಅಲಿಯಾಸ್ ಕಣುಮಾ ಪ್ರಾಣಪಕ್ಷಿ ಹಾರಿಹೋಗಿದೆ.

ವಿದ್ಯಾನಗರ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!