ರೌಡಿಶೀಟರ್ ಅಳಿಯನ ಮೇಲೆ ಗುಂಡಿನ ದಾಳಿ: ಆಸ್ಪತ್ರೆಗೆ ದಾಖಲು

ಹೊಸದಿಗಂತ ವರದಿ,ವಿಜಯಪುರ:

ಹಳೇ ವೈಷಮ್ಯದ ಹಿನ್ನೆಲೆ ರೌಡಿಶೀಟರ್ ಅಳಿಯನ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವ ಘಟನೆ ನಗರದ ಬೆಂಡಿಗೇರಿ ಓಣಿಯಲ್ಲಿ ನಡೆದಿದೆ.

ಇಲ್ಲಿನ ಶೋಯೆಬ್‌ ಕಕ್ಕಳಮೇಲಿ ಎಂಬವನು ಗಾಯಗೊಂಡ ಯುವಕ.

ಶೋಯೆಬ್‌ ಈತ ರೌಡಿಶೀಟರ್ ಶೇಖ್ ಮೋದಿ ಅಳಿಯನಾಗಿದ್ದು, ಹಳೇ ವೈಷಮ್ಯದಿಂದ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದು, ಗಾಯಾಳುವನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನವಾನೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಗೋಳಗುಮ್ಮಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!