ರೂ. 23 ಕೋಟಿ ವೆಚ್ಚದ ರಸ್ತೆ ಕಾಮಗಾರಿಗೆ ಚಾಲನೆ

ಹೊಸದಿಗಂತ ವರದಿ ಮಡಿಕೇರಿ:

ರಾಜ್ಯ ರಸ್ತೆ ಅಭಿವೃದ್ಧಿ ಯೋಜನೆಯಡಿ ರೂ.23 ಕೋಟಿ ವೆಚ್ಚದ ವಿವಿಧ ರಸ್ತೆ ಕಾಮಗಾರಿಗೆ ವೀರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ ಭೂಮಿ ಪೂಜೆ ನೆರವೇರಿಸಿದರು.

ಹುಣಸೂರು-ತಲಕಾವೇರಿ ರಾಜ್ಯ ಹೆದ್ದಾರಿಯ ಆನೆ ಚೌಕೂರುನಿಂದ ಮಜ್ಜಿಗೆಹಳ್ಳ, ಗೋಣಿಕೊಪ್ಪ ಉಮಾ ಮಹೇಶ್ವರಿ ದೇವಸ್ಥಾನದಿಂದ ವೀರಾಜಪೇಟೆ ಮತ್ತು ಕೊಣನೂರು-ಮಾಕುಟ್ಟ ರಾಜ್ಯ ಹೆದ್ದಾರಿಯ ವೀರಾಜಪೇಟೆ ಪೊಲೀಸ್ ಠಾಣೆ ಮುಂಭಾಗದಿಂದ ಪೆರುಂಬಾಡಿ ಗೇಟ್’ವರೆಗೆ 21.70 ಕಿ.ಮೀ. ರಸ್ತೆ ಮರು ಡಾಮರೀಕರಣಕ್ಕೆ ಚಾಲನೆ ಅವರು ನೀಡಿದರು.
ಈ ಸಂದರ್ಭ ಅಕ್ರಮಸಕ್ರಮ ಸಮಿತಿ ಅಧ್ಯಕ್ಣ ಗಿರೀಶ್ ಗಣಪತಿ, ಗೋಣಿಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು ಹಾಗೂ ಗ್ರಾಮಸ್ಥರು ಹಾಜರಿದ್ದರು

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!