ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಳೆದ 53 ದಿನಗಳಿಂದ ಕಬ್ಬಿಗೆಸೂಕ್ತ ಬೆಲೆ ನಿಗದಿ ಮಾಡುವಂತೆ ಕಬ್ಬು ಬೆಳೆಗಾರರ ಹೋರಾಟ ನಡೆಸುತ್ತಿದ್ದು, ಇದೀಗ ಪ್ರತಿ ಟನ್ ಕಬ್ಬಿಗೆ 2,850 ರೂ. ದರ ಕೊಡಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭರವಸೆ ನೀಡಿದ್ದಾರೆ. ಈ ಮೂಲಕ ಬೆಳೆಗಾರರ ಹೋರಾಟಕ್ಕೆ ಜಯ ಸಿಕ್ಕಿದೆ.
ಮುಧೋಳ ನಗರದ ಸಂಗೊಳ್ಳಿ ರಾಯಣ್ಣ ಸರ್ಕಲ್ನಲ್ಲಿ ಬೆಳೆಗಾರರು ಪ್ರತಿಭಟನೆ ಮಾಡುತ್ತಿದ್ದರು. ಇಂದು ಸಿಎಂ ಬೊಮ್ಮಾಯಿ ಬಾಗಲಕೋಟೆ ಜಿಲ್ಲಾಧಿಕಾರಿಗಳಿಗೆ ಫೋನ್ ಮಾಡಿ ಪ್ರತಿ ಟನ್ ಕಬ್ಬಿಗೆ 2,850 ರೂ. ಕೊಡಿಸುವುದಾಗಿ ತಿಳಿಸಿದರು.
ಬಳಿಕ ಎಡಿಸಿ ಮಹದೇವ ಮುರಗಿ ಹಾಗೂ ಜಮಖಂಡಿ ಎಸಿ ಸಿದ್ದು ಹುಲ್ಲಳ್ಳಿ ಪ್ರತಿಭಟನಾ ನಿರತರ ಸ್ಥಳಕ್ಕೆ ತೆರಳಿ ಮಾಹಿತಿ ನೀಡಿದ್ದಾರೆ. ಕಬ್ಬು ಬೆಳೆಗಾರರು ಹೋರಾಟ ಕೈ ಬಿಟ್ಟಿದ್ದಾರೆ.