ಹೊಸದಿಗಂತ ಡಿಜಿಟಲ್ ಡೆಸ್ಕ್
ಕೊರೋನಾದಿಂದ ಮೃತಪಟ್ಟ ವ್ಯಕ್ತಿಗಳಿಗೆ ನೀಡುವಪರಿಹಾರ ಕೋರಿ ಅರ್ಜಿ ಸಲ್ಲಿಸಲು ಕಾಲಮಿತಿ ನಿಗದಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಕೇಂದ್ರ ಮಾರ್ಗಸೂಚಿ ಅನ್ವಯ ತಲಾ,50,000 ರೂಗಳ ಪರಿಹಾರ ಧನ ನೀಡಲು ಆದೇಶಿಸಲಾಗಿರುತ್ತದೆ.
ಕೋವಿಡ್ ಸೋಂಕಿನಿಂದ ಮೃತಪಟ್ಟ ವ್ಯಕ್ತಿಗಳ ಕಾನೂನು ಬದ್ಧ ವಾರಸುದಾರರಿಗೆ ಪರಿಹಾರ ನೀಡಲು ಸ್ವೀಕಾರ ಹಾಗೂ ಅರ್ಹ ವ್ಯಕ್ತಿಗಳಿಗೆ ಪರಿಹಾರ ಪಾವತಿಸುವ ಕುರಿತು ನಿರ್ದೇಶನ ನೀಡಲಾಗಿದೆ.
ಮೃತಪಟ್ಟ ವ್ಯಕ್ತಿಗಳ ಪ್ರಕರಣದಲ್ಲಿ ಪರಿಹಾರ ಕೋರಿ ಅರ್ಜಿ ಸಲ್ಲಿಸಲು ದಿನಾಂಕ 20:03:2022 ರಿಂದ 60 ದಿನ ಕಾಲಮಿತಿ ನಿಗದಿಗೊಳಿಸಲಾಗಿದ್ದು,ಮಾರ್ಚ್ 20: ರ ನಂತರ ಕೋವಿಡ್ ಸೋಂಕಿನಿಂದ ಮೃತಪಟ್ಟ ವ್ಯಕ್ತಿಗಳ ಪರಿಹಾರ ಕೋರಿ ಅರ್ಜಿ ಸಲ್ಲಿಸಲು ಮರಣ ಸಂಭವಿಸಿದ ದಿನಾಂಕದಿಂದ 90 ದಿನಗಳ ಕಾಲಮಿತಿ ನಿಗದಿಗೊಳಿಸಲಾಗಿದೆ.ಆದರೆ ಅರ್ಜಿದಾರರು ಕೋವಿಡ್ 19 ಮರಣ ಪರಿಹಾರ ಪಡೆಯುವಲ್ಲಿ ನಕಲಿ ದಾಖಲೆ ನೀಡಿದಲ್ಲಿ ಅಂತಹವರ ವಿರುದ್ಧ ಕ್ರಮ ದಾಖಲಿಸಿದ ಜೈಲು ಶಿಕ್ಷೆಗೆ ಗುರಿ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.