ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ಕಚೇರಿ, ನಿವಾಸದಿಂದ ಬರೋಬ್ಬರಿ 6 ಕೋಟಿ ರೂ. ನಗದು ವಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇನ್ನೇನು ಚುನಾವಣೆ ಸಮೀಪಿಸುತ್ತಿದ್ದಂತೆ ದಾವಣಗೆರೆಯ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಬಿಡಬ್ಲೂಎಸ್‌ಎಸ್‌ಬಿ ಮುಖ್ಯ ಲೆಕ್ಕಾಧಿಕಾರಿ ಮಾಡಾಳ್ ಪ್ರಶಾಂತ್ ಕಚೇರಿ ಹಾಗೂ ನಿವಾಸದಲ್ಲಿ ಬರೋಬ್ಬರಿ ಆರು ಕೋಟಿ ರೂಪಾಯಿ ನಗದು ದೊರೆತಿದೆ.

ನಿನ್ನೆ ಸಂಜೆಯಿಂದ ಇಂದು ಬೆಳಗಿನ ಜಾವದವರೆಗೂ ಲೋಕಾಯುಕ್ತ ದಾಳಿ ಮುಂದುವರಿದಿದ್ದು, ರಾಶಿ ರಾಶಿ ಹಣ ಪತ್ತೆಯಾಗಿದೆ. ನಿನ್ನೆ ಪ್ರಶಾಂತ್ ಅವರ ಕಚೇರಿಯಲ್ಲಿ ೪೦ ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದಿದ್ದರು.

ಇದಾದ ಬಳಿಕ ಲೋಕಾಯುಕ್ತ ದಾಳಿ ನಡೆದಿದ್ದು, ಮನೆಯಲ್ಲಿ ಶೋಧ ಕಾರ್ಯ ಮುಂದುವರಿದಿತ್ತು. ಸಮಗ್ರವಾಗಿ ಶೋಧಿಸಿದಾಗ ಆರು ಕೋಟಿ ರೂಪಾಯಿ ನಗದು ಹಣ ಸಿಕ್ಕಿದ್ದು, ಸಿಬ್ಬಂದಿಗಳೇ ಶಾಕ್ ಆಗಿದ್ದಾರೆ.

ಪ್ರಶಾಂತ್ ಸಂಬಂಧಿ ಸಿದ್ದೇಶ್, ಬಿಡಬ್ಲೂಎಸ್ ಎಸ್ ಬಿ ಯು ಅಕೌಂಟೆಂಟ್ ಸುರೇಂದ್ರ, ಹಣ ನೀಡಲು ಬಂದಿದ್ದ ನಿಕೋಲಸ್ ಹಾಗೂ ಗಂಗಾಧರ್ ಎನ್ನುವವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿ ಇಂದು ಲೋಕಾಯುಕ್ತ ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!