ಮಾಜಿ ಮುಖ್ಯ ನ್ಯಾಯಮೂರ್ತಿ ಆರ್‌.ಸಿ. ಲಹೋಟಿ ನಿಧನಕ್ಕೆ ಆರ್‌ಎಸ್‌ಎಸ್ ಸಂತಾಪ

ಹೊಸದಿಗಂತ ಡಿಜಿಟಲ್ ಡೆಸ್ಕ್
ನಾಗ್ಪುರ: ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಆರ್‌.ಸಿ. ಲಹೋಟಿ ಅವರ ನಿಧನಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘ ತೀವ್ರ ಸಂತಾಪ ವ್ಯಕ್ತಪಡಿಸಿದೆ.
ವಿನಮ್ರ ಹಿನ್ನೆಲೆಯಿಂದ ಬೆಳೆದ ಅವರು ತಮ್ಮ ಶ್ರದ್ಧೆ, ವೃತ್ತಿಪರ ಪ್ರಾಮಾಣಿಕತೆ ಮತ್ತು ಕಾನೂನು ಹಾಗೂ ಸಮಾಜದ ಆಳವಾದ ಅಧ್ಯಯನದಿಂದಾಗಿ ದೇಶದ ನ್ಯಾಯಾಂಗದ ಉನ್ನತ ಸ್ಥಾನವನ್ನು ತಲುಪಿದರು. ಅವರ ಸೌಮ್ಯವಾದ ಆದರೆ ದೃಢವಾದ ಕಾರ್ಯವಿಧಾನ ಮತ್ತು ಸಹಾನುಭೂತಿಗಾಗಿ ಅವರು ನೆನಪಿನಲ್ಲಿ ಉಳಿಯುತ್ತಾರೆ. ನ್ಯಾಯಮೂರ್ತಿ ಲಹೋಟಿ ಅವರ ಕುಟುಂಬ ಸದಸ್ಯರಿಗೆ ನಮ್ಮ ಸಂತಾಪಗಳು. ಅಗಲಿದ ಆತ್ಮಕ್ಕೆ ಸದ್ಗತಿಯನ್ನು ಕರುಣಿಸಲೆಂದು ಪರಮಾತ್ಮನನ್ನು ಪ್ರಾರ್ಥಿಸುತ್ತೇನೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!