ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ, ಆಂಧ್ರ ಪ್ರದೇಶ, ತೆಲಂಗಾಣ ರಾಜ್ಯಗಳನ್ನು ಒಳಗೊಂಡ ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಮಧ್ಯ ಕ್ಷೇತ್ರದ ನೂತನ ಸಂಘ ಚಾಲಕರಾಗಿ ಡಾ. ಪಿ. ವಾಮನ್ ಶೆಣೈ ಆಯ್ಕೆಯಾಗಿದ್ದಾರೆ.
ನಾಗ್ಪುರದಲ್ಲಿ ನಡೆದ ಅಖಿಲ ಭಾರತೀಯ ಪ್ರತಿನಿಧಿ ಸಭಾ ಬೈಠಕ್ನಲ್ಲಿ ಶುಕ್ರವಾರ ಈ ಆಯ್ಕೆ ನಡೆದಿದೆ.
ಮಂಗಳೂರಿನ ಪ್ರಸಿದ್ಧ ವೈದ್ಯರೂ ಆಗಿರುವ ಡಾ. ಶೆಣೈ ಅವರು, ಈ ಹಿಂದೆ ಮಂಗಳೂರಿನ ಪ್ರತಾಪನಗರದ ಸಂಘಚಾಲಕರಾಗಿ, ಮಂಗಳೂರು ವಿಭಾಗದ ಸಂಘಚಾಲಕರಾಗಿ, ಕರ್ನಾಟಕ ದಕ್ಷಿಣ ಪ್ರಾಂತದ ಸಹಸೇವಾ ಪ್ರಮುಖರಾಗಿ, ಕರ್ನಾಟಕ ದಕ್ಷಿಣ ಪ್ರಾಂತದ ಸಹಸಂಘಚಾಲಕರಾಗಿದ್ದು, 2021ರಿಂದ ಕಳೆದ ಡಿ.17, ೨೦೨೩ರ ತನಕ ಕರ್ನಾಟಕ ದಕ್ಷಿಣ ಪ್ರಾಂತದ ಸಂಘಚಾಲಕರಾಗಿ ಜವಾಬ್ದಾರಿಯನ್ನು ನಿರ್ವಹಿಸಿದ್ದಾರೆ.
2015ರಿಂದ ದಕ್ಷಿಣ ಮಧ್ಯಕ್ಷೇತ್ರೀಯ ಸಂಘಚಾಲಕರಾಗಿ ಕಾರ್ಯನಿರ್ವಹಿಸಿದ್ದ ವಿ. ನಾಗರಾಜ್ ಅವರನ್ನು ದಕ್ಷಿಣ ಮಧ್ಯ ಕ್ಷೇತ್ರೀಯ ಕಾರ್ಯಕಾರಿಣಿ ಸದಸ್ಯರಾಗಿ ನಿಯುಕ್ತಿಗೊಳಿಸಲಾಗಿದೆ.