ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಶೋಭಾ ಕರಂದ್ಲಾಜೆ ಟಿಕೆಟ್ ಸಿಕ್ಕಿದೆ . ಈ ಕ್ಷೇತ್ರದಲ್ಲಿ ತಮಗೆ ಟಿಕೆಟ್ ಬೇಕು ಎಂದು ಸದಾನಂದ ಗೌಡ ಪಟ್ಟು ಹಿಡಿದಿದ್ದರು.
ಇತ್ತ ಟಿಕೆಟ್ ಘೋಷಣೆ ಬೆನ್ನಲ್ಲೇ ಸದಾನಂದ ಗೌಡ ಅವರು ಮಾಡಿರುವ ಟ್ವೀಟ್ ಎಲ್ಲರ ಕುತೂಹಲ ಕೆರಳಿಸಿದೆ. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ತಪ್ಪಿಸಿಕೊಂಡಿರುವ ಸದಾನಂದ ಗೌಡ ಅವರು ಕಾಂಗ್ರೆಸ್ಗೆ ಸೇರ್ಪಡೆಯಾಗುತ್ತಾರೆ ಎನ್ನುವ ವದಂತಿಗಳು ಜೋರಾಗಿದ್ದವು. ಇದಕ್ಕೆ ಟ್ವೀಟ್ ಮೂಲಕವೇ ಅವರು ಉತ್ತರ ನೀಡಿದ್ದು, ಇಂಥ ವದಂತಿಗಳನ್ನು ಹಬ್ಬಿಸುತ್ತಿರುವವರು ದೇಶದ್ರೋಹಿಗಳು ಎಂದು ಕರೆದಿದ್ದಾರೆ.
‘ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರುವುದಾಗಿ ಕೆಲವರು ಸುಳ್ಳು ಸುದ್ದಿಯನ್ನು ಹಬ್ಬಿಸುತ್ತಿದ್ದಾರೆ. ಇದು ಸತ್ಯಕ್ಕೆ ದೂರವಾದುದು. ಹಾರಿಕೆ ಸುದ್ದಿಯನ್ನು ಹಬ್ಬುವವರು ದೇಶದ್ರೋಹಿಗಳು’ ಎಂದು ಅವರು ಟ್ವೀಟ್ ಮಾಡಿದ್ದಾರೆ.
ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರುವುದಾಗಿ ಕೆಲವರು ಸುಳ್ಳು ಸುದ್ದಿಯನ್ನು ಹಬ್ಬಿಸುತ್ತಿದ್ದಾರೆ. ಇದು ಸತ್ಯಕ್ಕೆ ದೂರವಾದುದು. ಹಾರಿಕೆ ಸುದ್ದಿಯನ್ನು ಹಬ್ಬುವವರು ದೇಶದ್ರೋಹಿಗಳು.
— Sadananda Gowda ( Modi Ka Parivar ) (@DVSadanandGowda) March 13, 2024