ಕೇಂದ್ರ ಹಾಗೂ ರಾಜ್ಯ ಸರಕಾರದ ಯೋಜನೆಗಳ ಮಾಹಿತಿಯುಳ್ಳ ವೆಬ್‍ಸೈಟ್‍ಗೆ ಸಿಎಂರಿಂದ ಚಾಲನೆ

ಹೊಸದಿಗಂತ ಡಿಜಿಟಲ್ ಡೆಸ್ಕ್

ಬೆಂಗಳೂರು: ಕೇಂದ್ರ ಹಾಗೂ ರಾಜ್ಯ ಸರಕಾರದ ಯೋಜನೆಗಳ ಮಾಹಿತಿಯುಳ್ಳ ವೆಬ್‍ಸೈಟ್‍ನ್ನು ಸರಕಾರದ ಜಾಲತಾಣದೊಂದಿಗೆ ಜೋಡಣೆ ಮಾಡಿ, ಜನರ ಮತ್ತು ಸರಕಾರದ ನಡುವಿನ ಸಂವಹನಕ್ಕೆ ಸೇತುವೆಯಾಗಿ ಕಾರ್ಯನಿರ್ವಹಿಸಲಿ ಎಂದು ಮುಖ್ಯಮಂತ್ರಿಗಳು ಸಲಹೆ ನೀಡಿದರು.

ಅವರು ಇಂದು ಮೈಸೂರಿನ ಬೃಹತ್ ಕೌಶಲಾಭಿವೃದ್ಧಿ, ಸ್ವಯಂ ಉದ್ಯೋಗ ಹಾಗೂ ಉದ್ಯೋಗ ನೋಂದಣಿ ಕಾರ್ಯಕ್ರಮದ ಮಾಹಿತಿಯನ್ನೊಳಗೊಂಡ ಪುಸ್ತಕ ಸಮರ್ಪಣೆ ಹಾಗೂ ಕೇಂದ್ರ ಹಾಗೂ ರಾಜ್ಯ ಸರಕಾರದ ಯೋಜನೆಗಳ ಮಾಹಿತಿಯನ್ನೊಳಗೊಂಡ ವೆಬ್‍ಸೈಟ್‍ಗೆ ಚಾಲನೆ ನೀಡಿ ಮಾತನಾಡಿದರು.

ರಾಜ್ಯ ಸರಕಾರದ ಯೋಜನೆಗಳ ಮಾಹಿತಿಯನ್ನೊಳಗೊಂಡ ವೆಬ್‍ಸೈಟಿನಿಂದ ಸರಕಾರಿ ಕಾರ್ಯಕ್ರಮಗಳ ಉದ್ದೇಶ, ಮಾಹಿತಿ ಹಾಗೂ ಪ್ರಯೋಜನಗಳ ಬಗ್ಗೆ ಜನರಿಗೆ ಸ್ಪಷ್ಟವಾದ ಮಾಹಿತಿ ದೊರಕಲಿದೆ ಎಂದು ತಿಳಿಸಿದರು.

ಸಮಾಜದ ವಿವಿಧ ಸ್ತರಗಳಲ್ಲಿ ಜನೋಪಯೋಗಿ ಕಾರ್ಯಕ್ರಮಗಳು ಒಂದೇ ಸೂರಿನಡಿ ಲಭ್ಯವಾಗಿಸುವುದು ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿಯ ಚಿಂತನೆ. ಜನರ ಒಳಿತಿಗಾಗಿ ಇರುವ ಕಾರ್ಯಕ್ರಮಗಳ ಮಾಹಿತಿ ಹಾಗೂ ಅದರ ಲಾಭವನ್ನು ಪಡೆದುಕೊಳ್ಳಲು ಮಾರ್ಗಸೂಚಿಗಳು ಈ ಪುಸ್ತಕದಲ್ಲಿ ಲಭ್ಯವಿದೆ. ರಾಜ್ಯದ ಯೋಜನೆಗಳು ಪ್ರತಿಯೊಬ್ಬರಿಗೂ ತಲುಪಿಸುವಲ್ಲಿ ಈ ಪುಸ್ತಕ ವಿಶ್ವಕೋಶದಂತೆ ಕೆಲಸ ಮಾಡಲಿದ್ದು, ಆಡಳಿತಗಾರರಿಗೆ ಹಾಗೂ ಜನರಿಗೆ ಉತ್ತಮ ಮಾರ್ಗದರ್ಶಕವಾಗಿದೆ ಎಂದು ತಿಳಿಸಿದರು.

ಸರಕಾರದ ವಿವಿಧ ಯೋಜನೆ ಸವಲತ್ತುಗಳು ಹಾಗೂ ಅದನ್ನು ಪಡೆಯುವ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ, ಮಾರ್ಗದರ್ಶನ ನೀಡುವ ಸಾರ್ಥಕತೆಯ ಧ್ಯೇಯದೊಂದಿಗೆ ಪುಸ್ತಕವನ್ನು ಹೊರತರಲಾಗಿದ್ದು, ಈ ಉತ್ತಮ ಕಾರ್ಯವನ್ನು ಆಗಮಾಡಿಸಿದ ಶಾಸಕ ರಾಮದಾಸ್ ಅವರನ್ನು ಅಭಿನಂದಿಸಿದರು

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!