ಏ.17 ರಂದು ಅಂಕೋಲಾ ಕ್ಷೇತ್ರದ ಅಭ್ಯರ್ಥಿ ರೂಪಾಲಿ ನಾಯ್ಕ ನಾಮಪತ್ರ ಸಲ್ಲಿಕೆ

ಹೊಸ ದಿಗಂತ ವರದಿ, ಅಂಕೋಲಾ:

ಭಾರತೀಯ ಜನತಾ ಪಕ್ಷದ ಕಾರವಾರ ಅಂಕೋಲಾ ಕ್ಷೇತ್ರದ ಅಭ್ಯರ್ಥಿ ರೂಪಾಲಿ ನಾಯ್ಕ ಅವರು ಏಪ್ರಿಲ್ 17 ರಂದು ತಮ್ಮ ನಾಮಪತ್ರ ಸಲ್ಲಿಸಲಿದ್ದು ಈ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡಿ ಬೆಂಬಲ ಕೋರಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು , ಪಕ್ಷಕ್ಕೆ ಕಾರ್ಯಕರ್ತರು ಅತಿ ದೊಡ್ಡ ಶಕ್ತಿಯಾಗಿದ್ದು ಎಲ್ಲರೂ ಒಂದು ಕುಟುಂಬದಂತೆ ಕೆಲಸ ಮಾಡುತ್ತಿದ್ದಾರೆ, ಕ್ಷೇತ್ರದ ಜನರು ಬುದ್ಧಿವಂತರಾಗಿದ್ದು ಸರಿ ತಪ್ಪು ಯಾವುದು ಎನ್ನುವುದರ ಕುರಿತು ಆಲೋಚಿಸುವ ಶಕ್ತಿ ಅವರಿಗಿದೆ
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅಭಿವೃದ್ಧಿ ಕೆಲಸಗಳ ಕುರಿತು ಮಾಹಿತಿಯನ್ನು ಪ್ರತಿ ಬೂತ್ ಮಟ್ಟದಲ್ಲಿ ಜನರಿಗೆ ತಿಳಿಸುವ ಜವಾಬ್ದಾರಿ ಕಾರ್ಯಕರ್ತರ ಮೇಲಿದೆ ಎಂದರು.

ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ್ ಮಾತನಾಡಿ, ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ, ಸರ್ಕಾರದ ಸಾಧನೆ, ಕ್ಷೇತ್ರದಲ್ಲಿ ನಡೆಸಲಾದ ಅಭಿವೃದ್ಧಿ ಕೆಲಸಗಳನ್ನು ಜನರ ಮುಂದಿಟ್ಟು ಬಿಜೆಪಿ ಗೆಲುವಿಗೆ ಎಲ್ಲರೂ ಒಂದಾಗಿ ಶ್ರಮಿಸೋಣ ಎಂದರು.

ಅಂಕೋಲಾ ಮಂಡಲ ಅಧ್ಯಕ್ಷ ಸಂಜಯ ನಾಯ್ಕ, ಪ್ರಮುಖರುಗಳಾದ ರಾಜೇಂದ್ರ ನಾಯ್ಕ, ಜಗದೀಶ ನಾಯಕ ಮೊಗಟಾ ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!