ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಸ್ಕೋ ನರಮೇಧದ ಘಟನೆ ನಡೆದ ಬಳಿಕ ಮೊದಲ ಬಾರಿಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಬಹಿರಂಗವಾಗಿ ದೇಶವನ್ನುದ್ದೇಶಿಸಿ ಮಾತನಾಡಿದ್ದಾರೆ.
ರಕ್ತಸಿಕ್ತ, ಬರ್ಬರ ಭಯೋತ್ಪಾದಕ ಕೃತ್ಯಕ್ಕೆ ಸಂಬಂಧಿಸಿದಂತೆ, ಅದರಲ್ಲಿ ಬಲಿಯಾದ ಹತ್ತಾರು ಅಮಾಯಕರು, ಶಾಂತಿಯುತ ಜನರಿಗಾಗಿ ಸಂತಾಪ ಸೂಚಿಸುತ್ತೇನೆ. ಮಾ.24 ರಾಷ್ಟ್ರೀಯ ಶೋಕಾಚರಣೆಯ ದಿನವೆಂದು ಘೋಷಿಸುತ್ತೇನೆ ಎಂದು ಅವರು ಹೇಳಿದ್ದಾರೆ.