ಸೋರುತಿಹುದು ಶಬರಿಮಲೆ ಅಯ್ಯಪ್ಪನ ಸ್ವರ್ಣಲೇಪಿತ ಮಾಳಿಗೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ 

ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಸ್ಥಳ ರಳದ ಶಬರಿಮಲೆಯ ಅಯ್ಯಪ್ಪ ದೇವಸ್ಥಾನದ ಗರ್ಭಗುಡಿಯ ಚಿನ್ನಲೇಪಿತ ಮಾಳಿಗೆ ಸೋರುತ್ತಿದೆ.
ದೇವಸ್ಥಾನದ ಉನ್ನತ ಸಮಿತಿಯಾದ ‘ತಿರುವಾಂಕೂರು ದೇವಸ್ವಂ ಮಂಡಳಿ’ಗೆ ಈ ಲೋಪ ಗಮನಕ್ಕೆ ಬಂದಿದ್ದು ಶೀಘ್ರದಲ್ಲೇ ಅದನ್ನು ಸರಿ ಮಾಡುವುದಾಗಿ ತಿಳಿಸಿದೆ.
ದೇವಸ್ಥಾನದ ಗರ್ಭಗುಡಿಯ ಎಡಮೂಲೆಯಲ್ಲಿ ಚಿನ್ನಲೇಪಿತ ಮಾಳಿಗೆಯಲ್ಲಿ ನೀರು ಸೋರುತ್ತಿರುವುದು ಕಂಡು ಬಂದಿದೆ.
ಆಗಸ್ಟ್‌ 3 ರಂದು ಬಾಗಿಲು ತೆಗೆದು ಪರೀಕ್ಷೆ ಮಾಡಿದರೆ ಸೋರುವ ಪ್ರಮಾಣ ಹಾಗೂ ಹಾನಿಯ ಪ್ರಮಾಣ ಎಷ್ಟು ಎಂದು ಗೊತ್ತಾಗಲಿದೆ ಎಂದು ಮಂಡಳಿ ತಿಳಿಸಿದೆ.
ಬಂಗಾರದ ಮಾಳಿಗೆ ರಿಪೇರಿ ಕಾರ್ಯಕ್ಕೆ ತಗುಲುವ ವೆಚ್ಚವನ್ನು ಸಂಪೂರ್ಣವಾಗಿ ‘ತಿರುವಾಂಕೂರು ದೇವಸ್ವಂ ಮಂಡಳಿ’ಯೇ ಭರಿಸಲಿದೆ ಎಂದು ಶಬರಿಮಲೆ ದೇವಸ್ಥಾನದ ಮುಖ್ಯ ಅರ್ಚಕ ಕಂದರಾರು ರಾಜೀವರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!